
- ಸರ್ಕಾರ ವಿಶ್ವವಿದ್ಯಾಲಯದ ತಂಡ ಕಳಿಸಿ ಅಧ್ಯಯನ ಕೈಗೊಂಡಿದೆ
- ವಿಜ್ಞಾನಿಗಳ ಶಿಫಾರಸು ಮಾಡುವ ಕ್ರಮ ಕೂಡಲೇ ಕೈಗೊಳ್ಳಲಾಗುವುದು
ಅಡಿಕೆ ಬೆಳೆಗೆ ತಗಲಿರುವ ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕೂ ಜಿಲ್ಲೆಗಳಿಗೆ ಈ ಮೊತ್ತವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆ ಉದ್ಘಾಟನೆಗೆ ತೆರಳುವ ವೇಳೆ ಹರಿಹರಪುರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
“ಸರ್ಕಾರ ವಿಶ್ವವಿದ್ಯಾಲಯದ ತಂಡವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ ಚಿಕ್ಕಮಗಳೂರಿಗೆ ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ರೋಗ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹರಡುತ್ತಿದೆ. ಅದಕ್ಕಾಗಿ ಫಂಗಸ್ ನಿವಾರಣೆಗೆ ಔಷಧಿ ಸಿಂಪಡಣೆ ಮಾಡಲಾಗುವುದು. ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆಗೆ ನೆಟೆ ರೋಗ; ಕಂಗಾಲಾದ ರೈತರಿಂದ ನೆರವಿಗೆ ಆಗ್ರಹ
ಶಾಸಕ ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಈಗಾಗಲೇ ಮಾತನಾಡಿ ಎಲ್ಲ ರೀತಿಯ ರಕ್ಷಣೆ ನೀಡಲು ಹಾಗೂ ತನಿಖೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.