
- ʼಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆ ಆಗುತ್ತದೆʼ ಹೇಳಿಕೆ ವಿರುದ್ಧ ದೂರು
- ಶಾಸಕ ಸಿ ಟಿ ರವಿ ಕಮ್ಯೂನಲ್ ಫೆಲೊ. ಅವನಿಗೆ ಉತ್ತರ ಕೊಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿ, ನಿಂದಿಸಿದ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವಿರುದ್ಧ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ.
“ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆ ಆಗುತ್ತದೆ” ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿಕೆ ನೀಡಿದ್ದರು. “ಕಾನೂನು ಸುವ್ಯವಸ್ಥೆ ಹದಗೆಡಿಸುವ ಹೇಳಿಕೆ ನೀಡಿದ್ದಾರೆ" ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ನೇತೃತ್ವದಲ್ಲಿ ದೂರು ದಾಖಲಾಗಿದೆ.
ಸಿ ಟಿ ರವಿ ಹೇಳಿಕೆ ಬಗ್ಗೆ ಬೆಳಿಗ್ಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, “ಶಾಸಕ ಸಿ ಟಿ ರವಿ ಕಮ್ಯೂನಲ್ ಫೆಲೊ. ಅವನಿಗೆ ಉತ್ತರ ಕೊಡಲ್ಲ. ಅವರಿಗೆ ಜಾತ್ಯತೀತ ತತ್ವ ಅರ್ಥ ಆಗಲ್ಲ” ಎಂದು ಹರಿಹಾಯ್ದಿದ್ದರು.
ಹಾಗೆಯೇ “ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಕೊಲೆಯಾಗುತ್ತದೆ” ಎಂದು ಸಿ ಟಿ ರವಿ ಹೇಳಿಕೆ ವಿಚಾರವಾಗಿ, ಚಿತ್ರದುರ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿ, “ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಸುದ್ದಿ ಓದಿದ್ದೀರಾ? ಸಿ ಟಿ ರವಿ ಕಮ್ಯುನಲ್ ಫೆಲೋ, ಅವನಿಗೆಲ್ಲಾ ನಾನು ಉತ್ತರ ಕೊಟ್ಟುಕೊಂಡು ಕೂರಲ್ಲ: ಸಿದ್ದರಾಮಯ್ಯ
ಮುಂದುವರಿದು, “ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಭ್ರಷ್ಟಾಚಾರ ಮಾಡಲು, ಮತಗಳ್ಳತನ ಕೇಸ್ ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ. ನಮ್ಮ ಕಡೆಯವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ಮೊದಲು ಶಾಸಕ ಸಿ ಟಿ ರವಿ ವಿರುದ್ಧ ಪ್ರಕರಣ ದಾಖಲಿಸಬೇಕು” ಎಂದು ಡಿಕೆಶಿ ಒತ್ತಾಯಿಸಿದ್ದರು.