ತುಮಕೂರು | ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ: ಸಚಿವ ಕೆ.ಎನ್ ರಾಜಣ್ಣ

Date:

ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗಕ್ಕೆ ತನ್ನದೇ ಆದ ಇತಿಹಾಸವಿದೆ. ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಭಿಪ್ರಾಯಪಟ್ಟರು.

ಮಧುಗಿರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ನೌಕರರ ಮಕ್ಕಳಿಗೆ ಶಾಲಾ ಕಿಟ್ ತಿವರಣೆ ಮಾಡಿ ಅವರು ಮಾತನಾಡಿದರು. “ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಮತ್ತು ಎಸ್‌ಪಿ ಕಚೇರಿ ಹೊರತು ಪಡಿಸಿ ಜಿಲ್ಲಾ ಕೇಂದ್ರದಲ್ಲಿರಬೇಕಾದ ಎಲ್ಲ ಕಚೇರಿಗಳೂ ಇವೆ. ಮಧುಗಿರಿ ಜಿಲ್ಲೆಯಾದರೆ, ಈ ಭಾಗದ ಬರಪೀಡಿತ ಪ್ರದೇಶಗಳಾದ ಪಾವಗಡ, ಶಿರಾ, ಕೊರಟಗೆರೆ ವ್ಯಾಪ್ತಿಯ ಜನತೆಗೆ ಅನುಕೂಲವಾಗಲಿದೆ” ಎಂದರು.

“ತಾಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಿ ಉದ್ಯೋಗ ದೊರಕಿಸಿಕೊಡುವ ಮಹದಾಸೆಯಿದೆ. ಸಂಸದರು ಎಲ್ಲ ಸಂದರ್ಭದಲ್ಲೂ ನಮಗೆ ಸಹಕಾರ ನೀಡುತ್ತಿದ್ದು, ಮಧುಗಿರಿಯ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಅವರು ಯಾವತ್ತೂ ರೈತರ, ಬಡವರ ಮತ್ತು ಅಲ್ಪಸಂಖ್ಯಾತರ ಪರ ಕೆಲಸ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ಈ ಭಾಗದ ಎಲ್ಲ ಕೆರೆಗಳಿಗೂ ನೀರು ಹರಿಸಲಾಗುವುದು. ಸಂಸದರು ನೀರಾವರಿ ಯೋಜನೆಗಳ ಜಾರಿಗೆ ಹೆಚ್ಚಿನ ಸಹಕಾರ ನೀಡಲಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವವರೆಲ್ಲರೂ ಕಟ್ಟಡ ಕಾರ್ಮಿಕರ ವ್ಯಾಪ್ತಿಗೆ ಬರುತ್ತಾರೆ. ಅವರ ಮಕ್ಕಳ ವಿದ್ಯಾಬ್ಯಾಸಕ್ಕೆ ಅನುಕೂಲ ಮಾಡಿಕೊಡಲು ಪರಿಕರಗಳ ವಿತರಣೆ ಉತ್ತಮ ಕಾರ್ಯಕ್ರಮ. ಯಾರಿಂದಲಾದರೂ ಸರಿ ಯಾವ ರೂಪದಲ್ಲಾದರೂ ಸರಿ ಬಡವರ ಮಕ್ಕಳಿಗೆ ಅನುಕೂಲವಾದರೆ ಸಾಕು. ಇಂದು ವಿದ್ಯಾಬ್ಯಾಸಕ್ಕೆ ಬಹಳಷ್ಟು ಅನುಕೂಲಗಳಿದ್ದು,ವಿದ್ಯೆಯ ಮಹತ್ವವೂ ಬಹಳ ಹೆಚ್ಚಿದೆ. ಕಡು ಬಡತನದಿಂದ ಬಂದವರು ಐಎಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ವಿದ್ಯಾರ್ಥಿಗಳು ಇಂತಹ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಂಡು ಉತ್ತಮ ಶಿಕ್ಷಣ ಗಳಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಇಟ್ಟುಕೊಳ್ಳಬೇಕು” ಎಂದರು.

ಸಂಸದ ಜಿ.ಎಸ್ ಬಸವರಾಜು ‌ಮಾತನಾಡಿ, “ರಾಜಣ್ಣನವರು ಸಚಿವರಾದ ತಕ್ಷಣ ಕಾರ್ಮಿಕ ಇಲಾಖೆಗೆ ಸರ್ಕಾರಿ ಕಟ್ಟಡ ಒದಗಿಸಿಕೊಟ್ಟಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ಸುಮಾರು 90 ಕೋಟಿ ಅನುದಾನ ಖರ್ಚಾಗದೇ ಉಳಿದಿದೆ. ಸಚಿವರು ಅನುದಾನ ಸದ್ಬಳಕೆಯ ಕಡೆ ಗಮನಹರಿಸಬೇಕು. ಮಧುಗಿರಿಗೆ ತನ್ನದೇ ಆದ ಇತಿಹಾಸವಿದ್ದು, ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ಮಹಿಳೆ, ಶೂದ್ರರನ್ನು ಶಿಕ್ಷಣದಿಂದ ದೂರವಿರಿಸಿದ್ದ ಚಾತುರ್ವರ್ಣ ವ್ಯವಸ್ಥೆ : ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ಸಿಬ್ಗತ್ ಉಲ್ಲಾ, ಕಾರ್ಮಿಕ ಅಧಿಕಾರಿ ಕೆ. ತೇಜಾವತಿ , ಕಾರ್ಮಿಕ ನಿರೀಕ್ಷಕರಾದ ಅಬ್ದುಲ್ ರವೂಫ್, ಎಂ.ಎಲ್ ಶ್ರೀಕಾಂತ್ , ಶಿವಕುಮಾರ ಸ್ವಾಮಿ, ಗಂಗಲಕ್ಷ್ಮೀ ಮುಖಂಡರಾದ ತುಂಗೋಟಿ ರಾಮಣ್ಣ , ಎಸ್ ಬಿ ಟಿ ರಾಮು , ಸಾಧಿಕ್, ಪುರಸಭಾ ಮಾಜಿ ಅಧ್ಯಕ್ಷ ಮಹಮದ್ ಅಯುಬ್, ಪುರಸಭಾ ಸದಸ್ಯ ಅಲೀಮ್, ಬಾಲ ಕಾರ್ಮಿಕರ ಯೋಜನಾ ನಿರ್ದೇಶಕ ರವಿಕುಮಾರ್ ಹಾಗೂ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

ಕಲಬುರಗಿ | ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿದೆ ಈ ಬಾರಿಯ ಚುನಾವಣೆ: ದಸಂಸ

ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ...

₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಫುಡ್ ಡೆಲಿವರಿ ಆ್ಯಪ್ ಬಳಸಿ ಕಳೆದ ವರ್ಷ ಆರ್ಡರ್ ಮಾಡಿದ್ದ ಐಸ್...