ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಬಸ್‌; 36 ಮಂದಿ ದುರ್ಮರಣ

Date:

ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.

ಬುಧವಾರ ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 55 ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 36 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ.

ಸ್ಥಳೀಯರು, ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ದೋಡಾ ಮತ್ತು ಕಿಶ್ತ್ವಾರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ, ಗಾಯಾಳುಗಳನ್ನು ವಿಮಾನದ ಮೂಲಕ ಸಾಗಿಸಲು ಹೆಲಿಕಾಪ್ಟರ್ ಸೇವೆಯನ್ನು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಸ್‌ ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣತಪ್ಪಿ, ದೋಡಾ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ 300 ಮೀಟರ್‌ಗಳಷ್ಟು ಆಳದ ಕಂದಕಕ್ಕೆ ಉರುಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...