ಗುಜರಾತ್ ಚುನಾವಣೆ | ಬಿಜೆಪಿ ₹209 ಕೋಟಿ, ಕಾಂಗ್ರೆಸ್ ₹103 ಕೋಟಿ ಖರ್ಚು ಮಾಡಿವೆ

Date:

2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಮೊತ್ತವು ಕಾಂಗ್ರೆಸ್ ಖರ್ಚು ಮಾಡಿದ್ದಕ್ಕಿಂತ ದುಪ್ಪಟ್ಟಿದೆ ಎಂದು ಚುನಾವಣಾ ಆಯೋಗಕ್ಕೆ ಪಕ್ಷಗಳು ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿದುಬಂದಿದೆ.

ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಎಲ್ಲ ಪಕ್ಷಗಳ ಚುನಾವಣಾ ವೆಚ್ಚದ ಮಾಹಿತಿಯನ್ನು ಪ್ರಕಟಿಸಿದೆ. ಬಿಜೆಪಿಯು ಒಟ್ಟು 209.97 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿರುವುದಾಗಿ ಹೇಳಿದೆ. ಅದರಲ್ಲಿ 163.77 ಕೋಟಿ ರೂಪಾಯಿಗಳನ್ನು ‘ಪಕ್ಷದ ಪ್ರಚಾರ’ಕ್ಕಾಗಿಯೇ ವೆಚ್ಚ ಮಾಡಿದ್ದಾಗಿ ಹೇಳಿಕೊಂಡಿದೆ.

ಪಕ್ಷವು ತನ್ನ ಅಭ್ಯರ್ಥಿಗಳ ಅಪರಾಧಗಳಿಗೆ ಸಂಬಂಧಿಸಿದ ಪೂರ್ವಾಪರಗಳ ಪ್ರಚಾರಕ್ಕಾಗಿ 5.15 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. (ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳನ್ನು ಪ್ರಚಾರ ಪಡಿಸುವುದು ಸುಪ್ರೀಂ ಕೋರ್ಟ್ ಆದೇಶಗಳು ಮತ್ತು ಇಸಿ ನಿರ್ದೇಶನಗಳ ಪ್ರಕಾರ ಕಡ್ಡಾಯವಾಗಿದೆ)

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಕಾಂಗ್ರೆಸ್‌ 103.26 ಕೋಟಿ ರೂಪಾಯಿಯನ್ನು ಚುನಾವಣೆಗೆ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ರಾಜ್ಯದಲ್ಲಿ ಮೂರನೇ ಪಕ್ಷವಾಗಿ ಹೊರಹೊಮ್ಮಿದ್ದ ಎಎಪಿಯು 33.8 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದಾಗಿ ಹೇಳಿದೆ.

ಗುಜರಾತ್ ವಿಧಾನಸಭೆಯ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆದ್ದು, ಬಾರೀ ಬಹುಮತದ ಸರ್ಕಾರ ರಚಿಸಿದೆ. ಉಳಿದಂತೆ ಕಾಂಗ್ರೆಸ್‌ ಕೇವಲ17 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಎಎಪಿ 5 ಮತ್ತು ಇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಿಮ್ಮ ಸೋದರ ಅತ್ಯಾಚಾರವೆಸಗಿದ’ ಎಂದು ಹೇಳಿದಕ್ಕೆ ಪತ್ನಿಯ ಕತ್ತು ಹಿಸುಕಿದ ಪತಿ

ನಿಮ್ಮ ಸೋದರ ಅತ್ಯಾಚಾರವೆಸಗಿದ ಎಂದು ಹೇಳಿದ್ದಕ್ಕೆ ಪತ್ನಿಯ ಎದೆಯ ಮೇಲೆ ಕುಳಿತುಕೊಂಡ...

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...