ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ ಟಿ ರವಿ ವ್ಯಂಗ್ಯ

Date:

ಪಂಚರಾಜ್ಯಗಳ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಅಂಬಿಕಾಪತಿ, ಬಿಲ್ಡರ್ ಸಂತೋಷ್ ಕೃಷ್ಣಪ್ಪ ಅವರ ಮನೆಯಲ್ಲಿ ಸಿಕ್ಕ ಹಣವೇ ಇದಕ್ಕೆ ಸಾಕ್ಷಿ. ಹಾಗಾಗಿ, ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ ಎಂದು ಮಾಜಿ ಸಚಿವ ಸಿಟಿ ರವಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಮುಕ್ತವಾದ ಸರ್ಕಾರ ಅಂತ ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ ಅವರ ಮೂಗಿನ ಕೆಳಗೆ ಈ ರೀತಿ ಘಟನೆ ನಡೆದಿದೆ. ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ. 42 ಕೋಟಿ ಈಗ ಸಿಕ್ಕಿದೆಯಲ್ವಾ ಅದಕ್ಕೆ ಮೊದಲು ಉತ್ತರ ಕೊಡಿ’ ಎಂದು ಆಗ್ರಹಿಸಿದ್ದಾರೆ.

ಪತ್ತೆಯಾದ ಹಣದ ಬಗ್ಗೆ ಸಿಬಿಐ ತನಿಖೆ ಆಗಲೇಬೇಕು. 100 ಜನ ಬೇನಾಮಿ ಈ ಹಣಕ್ಕೆ ಇದ್ದಾರೆ. ಇಬ್ಬರು ಸಿಕ್ಕಿದ್ದಾರೆ. ಉಳಿದ 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭಾ ಚುನಾವಣೆಗೆ 2 ಸಾವಿರ ಕೋಟಿ ಕೊಡುತ್ತೇನೆ ಅನ್ನೋದು ಚರ್ಚೆ ಆಗುತ್ತಿದೆ. ಬ್ರಾಂಡ್ ಬೆಂಗಳೂರು ಅಂದ್ರೆ ಭ್ರಷ್ಟ ಬೆಂಗಳೂರನ್ನ ಮಾಡಿಕೊಳ್ಳಲು ಹೋಗುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಸಿ ಟಿ ರವಿ ಹರಿಹಾಯ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗುತ್ತಿಗೆದಾರರ ಮನೆ ಮೇಲೆ ದಾಳಿ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜಕೀಯ ಅಂತ ಹೇಳುತ್ತಾರೆ. ಐಟಿ ದಾಳಿ ಬಗ್ಗೆ ಪ್ರಿಯಾಂಗ್ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಹಾಗಾದರೆ 40, 42 ಕೋಟಿ ರೂಪಾಯಿ ಒಬ್ಬೊಬ್ಬರ ಮನೆಯಲ್ಲೂ ಸಿಕ್ಕಿದೆ ಅಲ್ವ, ಇದಕ್ಕೆ ಏನ್ ಹೇಳುತ್ತೀರಿ? ಹಾದಿಬೀದಿಯಲ್ಲಿ ಹೋಗುವವರ ಪ್ರಶ್ನೆಗೆ ಉತ್ತರಿಸಬೇಡಿ. ಈ ಹಣಕ್ಕೂ ನಿಮಗೂ ಸಂಬಂಧ ಇಲ್ಲವೆಂದಾದರೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಸಿಟಿ ರವಿ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ, ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ : ಶಾಸಕ ಯತ್ನಾಳ್

ಸಚಿವ ಈಶ್ವರ ಖಂಡ್ರೆಯವರು ಬಿಜೆಪಿಯ ಕೆಲ ನಾಯಕರ ಜತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡು...

ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು...

ಹಾಸನ ಪೆನ್‌ಡ್ರೈವ್ ಪ್ರಕರಣ | ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಜೆಡಿಎಸ್​ ಶಾಸಕ ಆಗ್ರಹ

ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು...

ಚಾಮರಾಜನಗರ | ಹಾಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು –ಚಾಮರಾಜನಗರ ಭಾಗದ ಪ್ರಭಾವಿ ದಲಿತ...