ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಐಸಿಎಂಆರ್‌ಗೆ ಆಮ್ ಆದ್ಮಿ ಪಕ್ಷ ದೂರು

Date:

ಅಕ್ರಮವಾಗಿ ಕೋವಿಡ್ ಟೆಸ್ಟ್‌ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರ ನಡೆಸಿರುವ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಆಮ್‌ ಆದ್ಮಿ ಪಕ್ಷ ನಡೆದ ಹಗರಣವನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡಿತ್ತು. ಇದೀಗ ಬೃಹತ್ ಹಗರಣದ ರೂವಾರಿ ಹಾಗೂ ಪ್ರಮುಖ ಆರೋಪಿ ಮಾಜಿ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಸುಧಾಕರ್, ಕಿದ್ವಾಯಿ ಗ್ರಂಥಿ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ.ರಾಮಚಂದ್ರ ಹಾಗೂ ಬಿಎಂಎಸ್ ಸಂಸ್ಥೆಯ ಮಾಲೀಕ ಎಸ್.ಪಿ.ರಕ್ಷಿತ್ ರವರ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐಸಿಎಂಆರ್) ದೂರನ್ನು ನೀಡಲಾಗಿದೆ ಎಂದು ಎಎಪಿ ತಿಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಟಿ ನಾಗಣ್ಣ, “ಆಮ್ ಆದ್ಮಿ ಪಕ್ಷ ಕಳೆದ ಮೂರು ದಿವಸಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯ ₹140 ಕೋಟಿ ಬೃಹತ್ ಹಗರಣವನ್ನು ಬಯಲಿಗೆಳೆದಿತ್ತು. ಈ ಸಂಬಂಧ 330 ಪುಟಗಳ ದಾಖಲೆಯನ್ನು ಸಹ ಬಹಿರಂಗಗೊಳಿಸಿತ್ತು. ಅಕ್ರಮ ಕೋವಿಡ್ ಟೆಸ್ಟ್ ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರಗಳನ್ನು ನಡೆಸಿದ ಹಗರಣವನ್ನು ಬಯಲು ಮಾಡಲಾಗಿತ್ತು” ಎಂದು ಹೇಳಿದರು.

“ಈ ಹಗರಣಕ್ಕೆ ಸಂಬಂಧಿಸಿದವರ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಐಸಿಎಂಆರ್) ದೂರನ್ನು ನೀಡಲಾಗಿದೆ. ಈ ಕೂಡಲೇ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಆರೋಪಿತ ಬಿಎಂಎಸ್ ಸಂಸ್ಥೆಯ ನಡುವಿನ ಒಪ್ಪಂದ ಪತ್ರ (MOU) ರದ್ದುಗೊಳಿಸಬೇಕು. ಹಗರಣದಲ್ಲಿ ಪಾಲ್ಗೊಂಡಿದ್ದ ಎಲ್ಲ ಪ್ರಭಾವಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ತೆಗೆದುಕೊಳ್ಳಬೇಕು. ತಪ್ಪಿತಸ್ಥರ ಆಸ್ತಿ ಮುಟ್ಟುಗೋಲನ್ನು ಹಾಕಿಕೊಳ್ಳುವ ಮೂಲಕ ಅಕ್ರಮ ನೂರಾರು ಕೋಟಿ ರೂಪಾಯಿ ವಸೂಲು ಮಾಡಬೇಕೆಂದು ದೂರನ್ನು ನೀಡಲಾಗಿದೆ” ಎಂದು ಬಿ.ಟಿ ನಾಗಣ್ಣ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದೀಪಾವಳಿ ಹಬ್ಬ | ಬೆಂಗಳೂರು – ಭಗತ್ ಕಿ ಕೋಠಿ ನಡುವೆ ವಿಶೇಷ ರೈಲುಗಳ ಸಂಚಾರ

ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಹಾಗೂ ಪಕ್ಷದ ಕಾನೂನು ಘಟಕದ ವಕೀಲರಾದ ಲೋಹಿತ್ ಜಿ. ಹನುಮಪುರ ಮಾತನಾಡಿ, “ರಾಜ್ಯದಲ್ಲಿನ ಎಲ್ಲ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆಗಳ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ರೋಗ ತಪಾಸಣೆ ವಿಭಾಗವನ್ನು ಖಾಸಗಿ ಲ್ಯಾಬೋರೇಟರಿಗಳಿಗೆ ನೀಡಿ ಸಾವಿರಾರು ಕೋಟಿ ತೆರಿಗೆದಾರರ ಹಣವನ್ನು ಲೂಟಿ ಮಾಡುತ್ತಿರುವ ವ್ಯವಸ್ಥೆಯನ್ನು ಸಮಗ್ರವಾಗಿ ದಾಖಲೆಗಳ ಸಮೇತ ಮುಂಬರುವ ದಿವಸಗಳಲ್ಲಿ ಬಹಿರಂಗಗೊಳಿಸಲಾಗುವುದು. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಇಂತಹ ಖಾಸಗಿ ಲ್ಯಾಬೋರೇಟರಿಗಳ ಹಗಲು ದರೋಡೆ ನಿಲ್ಲಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಿದವರಿಗೆ ಜ್ಯೂಸ್, ತಿಂಡಿ ನೀಡಲು ಮುಂದಾದ ಹೋಟೆಲ್‌ಗಳು

ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ  ಮತದಾನ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...