100 ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ 100 ಎಂಜನಿಯರಿಂಗ್‌ ಕಾಲೇಜು ದತ್ತು: ಪ್ರಿಯಾಂಕ್‌ ಖರ್ಗೆ

Date:

  • ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗ ಸಜ್ಜುಗೊಳಿಸಲು ಚಿಂತನೆ
  • ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಜೊತೆ ಸಭೆ

ರಾಜ್ಯದ 100 ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ವಿವಿಧ 100 ಎಂಜನಿಯರಿಂಗ್‌ ಕಾಲೇಜುಗಳನ್ನು ಜೋಡಿಸಿ ಕೌಶಲ್ಯ ಅಭಿವೃದ್ಧಿಯಲ್ಲಿ ತರಬೇತಿ ನೀಡುವ ಮೂಲಕ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಲ್ಲಿ ಬೇಡಿಕೆಯಿರುವ ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗವನ್ನು ಸಜ್ಜುಗೊಳಿಸಲು ಚಿಂತಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರೊಂದಿಗೆ ಶುಕ್ರವಾರ ನಡೆದ ಮಾಹಿತಿ ತಂತ್ರಜ್ಞಾನ ಕೌಶಲ್ಯ ಸಲಹಾ ಸಮಿತಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿರುವ ಮಾಹಿತಿ ತಂತ್ರಜ್ಞಾನ ಕಂಪೆನಿಗಳಲ್ಲಿ ಲಭ್ಯವಿರುವ ವಿಫುಲ ಹುದ್ದೆಗಳಿಗೆ ಕೌಶಲ್ಯ ನಿಪುಣತೆಯಿರುವ ಅಭ್ಯರ್ಥಿಗಳ ಅವಶ್ಯಕತೆಯಿದೆ, ಅನಿಮೇಷನ್‌, ಗೇಮಿಂಗ್‌, ಕೃತಕ ಬುದ್ಧಿಮತ್ತೆ, ರೊಬೋಟ್ಸ್‌, ಆಟೋಮೆಷಿನ್‌, ದ್ರೋಣ್‌ ಮುಂತಾದ ಕ್ಷೇತ್ರಗಳಲ್ಲಿ ಈಗ ಉದ್ಯೋಗಾವಕಾಶಗಳು ಹೇರಳವಾಗಿದ್ದು ಅಂತಹ ಹುದ್ದೆಗಳಿಗೆ ಯುವಕ ಯುವತಿಯರನ್ನು ಕುಶಲಿಗಳನ್ನಾಗಿ ಸಿದ್ಧ ಮಾಡಲು ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

ಸಭೆಯಲ್ಲಿ ಭಾಗಿಗಳಾಗಿದ್ದ ಪ್ರತಿಷ್ಠಿತ ಕಂಪೆನಿಗಳ ಉನ್ನತ ಅಧಿಕಾರಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಹುದ್ದೆಗಳ ಬೇಡಿಕೆಯಿದೆಯಾದರೂ, ಅಭ್ಯೃಥಿಗಳಲ್ಲಿ ಕೌಶಲ್ಯ ಪರಿಣತಿ ಇಲ್ಲದಿರುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುತ್ತಿಲ್ಲ, ಸರ್ಕಾರದ ವತಿಯಿಂದ ತಾಂತ್ರಿಕ ವಿದ್ಯಾರ್ಹತೆ ಇರುವ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯ ತರಬೇತಿ ನೀಡಿ ಸಜ್ಜುಗೊಳಿಸಿದಲ್ಲಿ ಐಟಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳಿಗೆ ಪೂರಕವಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕೌಶಲ್ಯ ಅಭಿವೃದ್ಧಿ ಮಂಡಳಿ ಪ್ರಾಧಿಕಾರದ ಅಧ್ಯಕ್ಷರಾದ ಸರಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಏಕರೂಪ್‌ ಕೌರ್‌ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಚಿಕ್ಕಮಗಳೂರು | ಜಯಪ್ರಕಾಶ್ ಹೆಗ್ಡೆ ಮಲೆನಾಡಿನ ಅಡಿಕೆ ಬೆಳೆಗಾರರ ಆಶಾಕಿರಣ: ಬಿ ಎ ರಮೇಶ್ ಹೆಗ್ಡೆ

"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ...