ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಬೇಡ: ಅಧಿಕಾರಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ

Date:

  • ಕೃಷಿ ಇಲಾಖೆಯಲ್ಲಿ ಖಾಲಿ ಇರುವ 5,195 ಹುದ್ದೆಗಳ ಭರ್ತಿಗೆ ಕ್ರಮ
  • ‘ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒ ಹಾಜರಿರಬೇಕು’

ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

“ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿಮಿ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿ ಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿರುವುದಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2022-23 ನೇ ಸಾಲಿನ ಮೂರನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ (84%) ಪ್ರದೇಶದಲ್ಲಿ ಕೈಗೊಳ್ಳಲಾಗಿರುತ್ತದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ” ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

2023-24 ಸಾಲಿನ ಮುಂಗಾರು ಹಂಗಾಮಿಗೆ 25.47 ಲಕ್ಷ ಮೆ.ಟನ್ ರಸಗೊಬ್ಬರ ಬೇಡಿಕೆ ಇದೆ. 7.30 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದೆ. ಪ್ರಸ್ತುತ ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. 1.68 ಲಕ್ಷ ಮೆ ಟನ್ ರಸಗೊಬ್ಬರ ಕಾಪು ದಾಸ್ತಾನು(Buffer Stock) ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಲಭ್ಯವಿದ್ದು, ಪ್ರಸ್ತುತ ರಸಗೊಬ್ಬರದ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು, ಸಿಎಂಗೆ ಮನವಿ ಮಾಡುತ್ತೇವೆ: ಸತೀಶ್‌ ಜಾರಕಿಹೊಳಿ

ರೈತರಿಗೆ ಪೂರೈಕೆಯಲ್ಲಿ ವಿಳಂಬ ಆಗಬಾರದು

“ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗಬಾರದು. ಪರೀಕ್ಷೆ ಮಾಡಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಕೆ ಮಾಡಬೇಕು. ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸಬೇಕು. ಮುಂಗಾರಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು” ಎಂದು ಸಚಿವ ಚಲುವರಾಯಸ್ವಾಮಿ ಅವರು ಸೂಚನೆ ನೀಡಿದರು.

“ಇದರ ಜೊತೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒಗಳು ಹಾಜರಿರಬೇಕು. ಮಣ್ಣು ಪರೀಕ್ಷೆ ರಿಪೋರ್ಟ್ ಗಳನ್ನು ಸೂಕ್ತ ಸಮಯದಲ್ಲಿ ನೀಡಬೇಕು. ಬೆಳೆ ವಿಮೆ ನೀಡುವಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಯಾದರೂ ಜಂಟಿ ನಿರ್ದೇಶಕರೇ ನೇರ ಹೊಣೆ ಆಗ್ತೀರಾ” ಎಂದು ಸಚಿವರು ಎಚ್ಚರಿಕೆ ನೀಡಿದರು.

ನೆಟೆರೋಗ: ಶೀಘ್ರದಲ್ಲೇ ಪರಿಹಾರ ಬಿಡುಗಡೆ

“2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 1,98,488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುತ್ತದೆ. ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿಗಳ ಅನುದಾನ ಘೋಷಿಸಲಾಗಿದ್ದು, ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು” ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.‌

ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ

“ಕೃಷಿ ಇಲಾಖೆಯಲ್ಲಿ ಶೇ‌.58% ನಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ. ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3,787 ಹುದ್ದೆಗಳು ಭರ್ತಿಯಾಗಿವೆ. 5,195 ಹುದ್ದೆಗಳು ಖಾಲಿ ಇರುತ್ತವೆ‌” ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...