ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಬೇಕೆಂದು ಎಐಡಿಎಸ್ಒ ಆಗ್ರಹಿಸಿದೆ.
ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಪ್ರೀತಿ ದೊಡ್ಡಮನಿ, “ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ” ಎಂದು ಹೇಳಿದ್ದಾರೆ.
“ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಎಐಡಿಎಸ್ಓ ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರವನ್ನು ವಿನಂತಿಸುತ್ತದೆ” ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಸ್ನೇಹಾ ಕಟ್ಟಿಮನಿ, ತುಳಜರಾಮ ಎನ್.ಕೆ, ಪೀತಿ ದೊಡ್ಡಮನಿ, ಗೋವಿಂದ ಯಳವಾರ. ನಾಗರಾಜ ರಾವೂರ, ಜಿಲ್ಲಾ ಸಮತಿ ಸದ್ಯಸರಾದ ಯುವರಾಜ ರಾಠೋಡ, ರಾಹುಲ ಜಾಧವ. ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.