ಇಂಡಿಯಾ-ಭಾರತ್‌ ವಿವಾದ : ಅಕ್ಷಯ್‌ ಕುಮಾರ್‌ ಸಮಯ ಸಾಧಕ ಬುದ್ಧಿಗೆ ಛೀಮಾರಿ ಹಾಕಿದ ನೆಟ್ಟಿಗರು

Date:

ಕೇಂದ್ರ ಸರ್ಕಾರ ದೇಶದ ಹೆಸರನ್ನು ಬದಲಿಸಲು ಮುಂದಾಗಿದೆ ಎಂಬ ಚರ್ಚೆ ಜೋರಾಗಿರುವ ಹೊತ್ತಿನಲ್ಲೇ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರ ಸಮಯ ಸಾಧಕತನ ಕೂಡ ಜಗಜ್ಜಾಹೀರಾಗಿದೆ.

ಇತ್ತೀಚೆಗೆ ರಾಷ್ಟ್ರಪತಿಗಳ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ʼಪ್ರೆಸಿಡೆಂಟ್‌ ಆಫ್‌ ಇಂಡಿಯಾʼ ಬದಲು ʼಪ್ರೆಸಿಡೆಂಟ್‌ ಆಫ್‌ ಭಾರತ್‌ʼ ಎಂದು ಉಲ್ಲೇಖಿಸಲಾಗಿತ್ತು. ಈ ಸಂಬಂಧ ದೇಶಾದ್ಯಂತ ಪರ ವಿರೋಧದ ಚರ್ಚೆಗಳು ಶುರುವಾಗಿವೆ. ಇದೇ ಸೂಕ್ಷ್ಮ ಸಂದರ್ಭವನ್ನು ಬಳಸಿಕೊಂಡು ಸಿನಿಮಾ ಪ್ರಚಾರಕ್ಕೆ ಮುಂದಾಗಿರುವ ಅಕ್ಷಯ್‌ ಕುಮಾರ್‌, ತಮ್ಮ ನೂತನ ಚಿತ್ರದ ಪೋಸ್ಟರ್‌ಗಳನ್ನು ಸರಣಿಯಾಗಿ ಬಿಡುಗಡೆ ಮಾಡಿದ್ದಾರೆ. ಚಿತ್ರದ ಟ್ಯಾಗ್‌ ಲೈನ್‌ನಲ್ಲಿ ʼಇಂಡಿಯಾʼ ಬದಲು ʼಭಾರತ್‌ʼ ಎಂದು ಉಲ್ಲೇಖಿಸಿ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

ಅಷ್ಟೇ ಅಲ್ಲ, ಅಕ್ಷಯ್‌ ಕುಮಾರ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ʼಮಿಶನ್‌ ರಾಣಿಗಂಜ್‌ʼ ಚಿತ್ರದ ಮೂರು ಪೋಸ್ಟರ್‌ಗಳನ್ನು ಕಳಪೆಯಾಗಿ ಎಡಿಟ್‌ ಮಾಡಲಾಗಿದೆ ಎಂದು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ. ಪ್ರಚಾರದಾಸೆಗೆ ಬಿದ್ದು ತರಾತುರಿಯಲ್ಲಿ ಒಂದೇ ಫೋಟೋವನ್ನು ಬಳಸಿ ಎರಡೆರೆಡು ಪೋಸ್ಟರ್‌ಗಳನ್ನು ಮಾಡಿದ್ದಾರೆ. ಎರಡೂ ಪೋಸ್ಟರ್‌ಗಳಲ್ಲಿ ಅಕ್ಷಯ್‌ ಕುಮಾರ್‌ ಜೊತೆಗೆ ನಿಂತಿರುವ ಕಲಾವಿದರ ಹಾವ-ಭಾವ ಬದಲಾಗಿಲ್ಲ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಕ್ಷಯ್‌ ಕುಮಾರ್‌ ʼಮಿಶನ್‌ ರಾಣಿಗಂಜ್‌ʼ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. 1989ರಲ್ಲಿ ಪಶ್ಚಿಮ ಬಂಗಾಳದ ರಾಣಿಗಂಜ್‌ನ ಕಲ್ಲಿದ್ದಲಿನ ಗಣಿಯಲ್ಲಿ ಸಿಲುಕಿದ್ದ 64 ಮಂದಿಯನ್ನು ಜಸ್ವಂತ್‌ ಸಿಂಗ್‌ ಗಿಲ್‌ ಎನ್ನುವ ಸಾಹಸಿ ತನ್ನ ಸಹ ಕಾರ್ಮಿಕರ ನೆರವಿನೊಂದಿಗೆ ರಕ್ಷಿಸಿದ್ದರು. ಬಾಲಿವುಡ್‌ನ ನಿರ್ದೆಶಕ ಸುರೇಶ್‌ ದೇಸಾಯಿ ಇದೇ ರೋಚಕ ಕಥೆಯನ್ನು ʼಮಿಶನ್‌ ರಾಣಿಗಂಜ್‌ʼ ಹೆಸರಿನಲ್ಲಿ ತೆರೆಗೆ ಅಳವಡಿಸಲು ಮುಂದಾಗಿದ್ದಾರೆ. ಅಕ್ಷಯ್‌ ಕುಮಾರ್‌, ಸಾಹಸಿ ಜಸ್ವಂತ್‌ ಸಿಂಗ್‌ ಗಿಲ್‌ ಅವರ ಪಾತ್ರದಲ್ಲಿ ನಟಿಸುತ್ತಿದ್ದು, ಪರಿಣಿತಿ ಚೋಪ್ರಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Sanket
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...