- ‘ತಮಿಳುನಾಡು ನೀರು ಬಳಕೆ ವಿಚಾರದಲ್ಲಿ ನಾವು ಏನನ್ನೂ ಮಾಡಿಲ್ಲ’
- ‘ತಮಿಳುನಾಡಿಗೆ ನೀರು ಬಿಟ್ಟಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡುವೆ’
ಕಾವೇರಿ ನೀರು ವಿಚಾರವಾಗಿ ಆಗಸ್ಟ್ 23 ರಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ನೀಡಲು ಕೆಲ ಹಿರಿಯ ಸಂಸದ ಸದಸ್ಯರನ್ನು ಕೂಡಾ ಆಹ್ವಾನಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ತಮಿಳುನಾಡು ನೀರು ಬಳಕೆ ವಿಚಾರದಲ್ಲಿ ನಾವು ಏನನ್ನೂ ಮಾಡಿಲ್ಲ, ಜೆಡಿಎಸ್, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾವೇರಿ ವಿಚಾರದಲ್ಲಿ ಏನು ಮಾಡಿದರು ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಬೇಕು ಆದರೆ, ಅವರು ಮಾಡಿಲ್ಲ. ನಾವು ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಬಿಟ್ಟಿದ್ದೇವೆ ಎಂಬುದರ ಬಗ್ಗೆ ದಾಖಲೆಗಳಿವೆ. ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು” ಎಂದರು.
“ಕರ್ನಾಟಕ ಮತ್ತು ತಮಿಳುನಾಡು ನೆರೆಹೊರೆಯ ರಾಜ್ಯಗಳಾಗಿದ್ದು, ಕಾವೇರಿ ವಿವಾದದಲ್ಲಿ ಉಭಯ ರಾಜ್ಯಗಳು ಪರಸ್ಪರ ಹೋರಾಡಲು ಬಯಸುವುದಿಲ್ಲ. ಪರಸ್ಪರ ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಅದನ್ನು ವಿಪಕ್ಷಗಳ ನಾಯಕರು ಅರ್ಥ ಮಾಡಿಕೊಳ್ಳಬೇಕಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ
“ತಮಿಳುನಾಡಿಗೆ ಪ್ರತಿದಿನ 24,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಉನ್ನತ ನ್ಯಾಯಾಲಯ ಆದೇಶಿಸಿದೆ. ಆದರೆ, ಕರ್ನಾಟಕ ರಾಜ್ಯ ನೀರಿನ ಕೊರತೆ ಎದುರಿಸುತ್ತಿದೆ. ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆಗಸ್ಟ್ ವರೆಗೂ 10,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ನಮಗೆ ಸೂಚಿಸಲಾಗಿತ್ತು. ನಮ್ಮ ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿದ್ದು, ಕನಿಷ್ಠ ಪಕ್ಷ ಸಮಯಾವಕಾಶದ ಅಗತ್ಯವಿದೆ” ಎಂದು ತಿಳಿಸಿದರು.