ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸಮೀಕ್ಷೆ ನಡೆಸಬೇಕೆಂದು ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜುಲೈ 21 ರಂದು ನೀಡಿದ್ದ ಆದೇಶವನ್ನು ಉತ್ತರ ಪ್ರದೇಶದ ಅಲಹಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ವಾರಣಾಸಿ ಕೋರ್ಟ್ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಅಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
“ನ್ಯಾಯದ ದೃಷ್ಟಿಯಿಂದ ವೈಜ್ಞಾನಿಕ ಸಮೀಕ್ಷೆ ಅಗತ್ಯವಿದೆ. ಇಲಾಖೆ ಆಥವಾ ಆಯೋಗದ ಮೂಲಕ ಸಮೀಕ್ಷೆ ನಡೆಸಲು ಅವಕಾಶ ಇದೆ. ಜ್ಞಾನವಾಪಿ ಆವರಣದಲ್ಲಿ ಎಎಸ್ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಆದೇಶ ನೀಡಿರುವುದು ಸಮರ್ಥನೀಯವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಪ್ರಿಂಕರ್ ದಿವಾಕರ್ ಅವರಿದ್ದ ಪೀಠ ಹೇಳಿದೆ.