ಶ್ರೀಲಂಕಾ ಕ್ರಿಕೆಟ್ ಮಂಡಳಿ ಹಾಳಾಗಲು ಜಯ್ ಶಾ ಕಾರಣ: ಅರ್ಜುನ ರಣತುಂಗ ಸ್ಫೋಟಕ ಹೇಳಿಕೆ

Date:

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್‌ಸಿ) ಅನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಹಾಳುಗೆಡವುತ್ತಿದ್ದಾರೆ ಎಂದು ಶ್ರೀಲಂಕಾದ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಆರೋಪಿಸಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ಜಯ್ ಶಾ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ನಿಯಂತ್ರಿಸುತ್ತಿದ್ದಾರೆ. ಅವರ ಒತ್ತಡದಿಂದಾಗಿ ಮಂಡಳಿ ಹಾಳಾಗುತ್ತಿದೆ. ಭಾರತದಲ್ಲಿನ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡುತ್ತಿದ್ದಾನೆ. ಭಾರತದ ಗೃಹ ಸಚಿವರಾಗಿರುವ ಅವರ ತಂದೆಯ ಕಾರಣದಿಂದಾಗಿ ಅವರು ಪ್ರಭಾವಿಗಳಾಗಿದ್ದಾರೆ” ಎಂದು ಅರ್ಜುನ ರಣತುಂಗ ತಿಳಿಸಿದ್ದಾರೆ.

“ಶ್ರೀಲಂಕಾ ಮಂಡಳಿಯ ಅಧಿಕಾರಿಗಳು ಜಯ್ ಶಾ ಅವರ ಪ್ರಭಾವಕ್ಕೆ ಒಳಗಾಗಿದ್ದು, ಮಂಡಳಿಯನ್ನು ಹಾಳು ಮಾಡಿ ನಿಯಂತ್ರಿಸಬಹುದು. ನಮ್ಮ ಮಂಡಳಿ ಏಕೆ ಹೀಗಾಯಿತು. ಇದಕ್ಕೆ ಕಾರಣರಾದ ಎಲ್ಲರನ್ನೂ ತನಿಖೆಯ ಮೂಲಕ ಬಹಿರಂಗಪಡಿಸಬೇಕಿದೆ. ವ್ಯಕ್ತಿಗತವಾಗಿ ದೇಶಕ್ಕೆ ದ್ರೋಹ ಮಾಡುವವರನ್ನು ಮಂಡಳಿಯ ಅಧ್ಯಕ್ಷರು ಸರಿಯಾದ ತನಿಖೆ ನಡೆಸುವ ಮೂಲಕ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮಂಡಳಿಯನ್ನು ಸ್ವಚ್ಛಗೊಳಿಸಲು ಸೂಕ್ತ ಸಮಯ ಇದಾಗಿದೆ” ಎಂದು ರಣತುಂಗ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ತನ್ನ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೀಲಂಕಾ ಮಂಡಳಿಯನ್ನು(ಎಸ್‌ಎಲ್‌ಸಿ) ಅಮಾನತುಗೊಳಿಸಿದ ಕೆಲವು ದಿನಗಳ ನಂತರ ರಣತುಂಗ ಹೇಳಿಕೆ ನೀಡಿದ್ದಾರೆ.

ಅರ್ಜುನ ರಣತುಂಗ 1996ರಲ್ಲಿ ಶ್ರೀಲಂಕಾ ವಿಶ್ವಕಪ್‌ ಮುಡಿಗೇರಿಸಿಕೊಂಡಾಗ ನಾಯಕರಾಗಿದ್ದರು. ಅವರ ಸಾರಥ್ಯದಲ್ಲಿ ತಂಡವು ಹಲವು ವರ್ಷಗಳ ಕಾಲ ಅತ್ಯಂತ ಬಲಿಷ್ಠವಾಗಿತ್ತು.

ಅದಕ್ಕೂ ಮೊದಲು, ಶ್ರೀಲಂಕಾ ಸಂಸತ್ತು ‘ಭ್ರಷ್ಟ ಎಸ್ಎಲ್ಸಿ ಆಡಳಿತ ಮಂಡಳಿಯನ್ನು ವಜಾಗೊಳಿಸಲು ಕರೆ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಐಸಿಸಿ ಇದನ್ನು ರಾಜಕೀಯ ಹಸ್ತಕ್ಷೇಪ ಎಂದು ಪರಿಗಣಿಸಿ ಮಂಡಳಿಯನ್ನು ಅಮಾನತುಗೊಳಿಸಿದೆ.

ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್‌ 21 ರಂದು ಐಸಿಸಿ ಮತ್ತೆ ಸಭೆ ಸೇರಲಿದೆ. ಸಭೆಯ ನಂತರ ಮುಂದಿನ ಕ್ರಮವು ಸ್ಪಷ್ಟವಾಗುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಐಸಿಸಿ ಸಂಘಟಿಸುವ ಯಾವುದೇ ಟೂರ್ನಿಯಲ್ಲಿ ಶ್ರೀಲಂಕಾ ಭಾಗವಹಿಸಲು ಅವಕಾಶ ಇಲ್ಲ‌.

2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ 9 ಪಂದ್ಯಗಳ ಪೈಕಿ ಕೇವಲ 2ರಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 4 ಅಂಕ ಪಡೆದುಕೊಂಡಿತ್ತು. ಬ್ಯಾಟಿಂಗ್‌ ಬೌಲಿಂಗ್‌ ಹಾಗೂ ಕಳಪೆ‌ ಫೀಲ್ಡಿಂಗ್‌ನಿಂದಾಗಿ ವಿಶ್ವಕಪ್‌ನಲ್ಲಿ ಸೋಲು ಅನುಭವಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ ರಾಜ್ಯಪಾಲದ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಡೆಯುವ ಹಿನ್ನೆಲೆ ಮಧ್ಯಪ್ರದೇಶ ಮಾಡುತ್ತಿರುವ ಪಶ್ಚಿಮ ಬಂಗಾಳ...

ಬಿಟ್‌ಕಾಯಿನ್ ಹಗರಣ| ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ಕುಂದ್ರಾಗೆ ಸೇರಿದ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ...

ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ...

ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ...