ಬಾಗಲಕೋಟೆ | 70ರ ದಶಕದ ದಲಿತ ಚಳವಳಿ ನಮಗೆ ದಾರಿ ತೋರಿಸಿ, ಎಚ್ಚರಿಸುತ್ತದೆ: ಪರಶುರಾಮ ನಿಲಾನಾಯಕ

Date:

70ರ ದಶಕದ ಅಂದಿನ ದಲಿತ ಚಳವಳಿಯ ಹೋರಾಟ ಎಂದಿಗೂ ನಮಗೆ ಸ್ಪೋರ್ತಿದಾಯಕ. ಜಿಲ್ಲೆಯ ತಳಸಮುದಾಯಗಳನ್ನು ಒಂದಡೆ ಸೇರಿಸಿ ಅವರಿಗೆ ಹೋರಾಟದ ದಾರಿಯನ್ನು ತೋರಿಸಿ, ಎಚ್ಚರಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ನಾಯಕ ಪರಶುರಾಮ ನಿಲಾನಾಯಕ ಹೇಳಿದರು.

ದಲಿತ ಸಂಘರ್ಷ ಸಮೀತಿ (ಭೀಮವಾದ) ಜಿಲ್ಲಾ ಸಮಿತಿಯು ಬಾಗಲಕೋಟೆಯ ನವನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದಲಿತ ಚಳುವಳಿಗೆ ಅಡಿಪಾಯ ಹಾಕಿದ ಕೀರ್ತಿ ರಾಜ್ಯದ ನಮ್ಮ ನಿಮ್ಮಲ್ಲೆರ ನಾಯಕ ಪ್ರೊ. ಬಿ.ಕೃಷ್ಣಪ್ಪರವರಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.

ಅವರ ಜೊತೆಗೂಡಿ ಅನೇಕ ಹಿರಿಯರು ಹೋರಾಟಗಾರರು ಅನ್ನ ಆಹಾರವಿಲ್ಲೆದೆ ಹಳ್ಳಿಹಳ್ಳಿಗೆ ಬೇಟಿನೀಡಿ ದಲಿತರ ಸಮಸ್ಯೆಗಳನ್ನು ಆಲಿಸಿ, ಅರಿತು ಹೊರಟದ ಮೂಲಕ ಸಮಸ್ಯೆಗಳನ್ನು ಬಗೆಹರಿಸುತ್ತ ಬಂದರು. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಮುನ್ನಡೆಯಬೇಕಾಗಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಾಗಲಕೋಟ ಜಿಲ್ಲೆಯ ಎಲ್ಲಾ ತಾಲೂಕು ಮುಖಂಡರು ಬಂದಿದ್ದಿರಿ ಪ್ರೊ. ಬಿ.ಕೃಷ್ಣಪ್ಪರವರು ವಿಚಾರಗಳನ್ನು ಗಲ್ಲಿ ಗಲ್ಲಿಗೆ ತಲುಪಿಸುವ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಎಂದು ಕಾರ್ಯಕರ್ತರಿಗೆ ಹೇಳಿದರು.

ದಲಿತ ಸಂಘರ್ಷ ಸಮೀತಿ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದವರಿಗೆ ಸಾಮೂಹಿಕ ಮದುವೆಗಳನ್ನು ಕಳೆದ 14 ವರ್ಷಗಳಿಂದ ಮಾಡುತ್ತ ಬರುತ್ತಿದೆ. ಈ ವರ್ಷ ವು ಅತ್ಯಂತ ಯಶಸ್ವಿಯಾಗಿ ನೆರೆವೆರಿಸೋಣ ಎಂದ ಅವರು, ಬರುವ ಏಪ್ರಿಲ್ 14, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ನಾವೆಲ್ಲರೂ ಸೇರಿ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ದುಂಡುವಯ್ಯ, ಡಿ. ಸಿದ್ದುರಾಜ, ಪ್ರಕಾಶ, ಶ್ಯಾಮ್ ಕಾಳೆ, ಯಲ್ಲಪ್ಪ ಹಳೆಮನಿ, ಕಲ್ಲಪ್ಪ ಚನ್ನವರ, ಪಡಿಯಪ್ಪ ಕಳ್ಳಿಮನಿ, ಸಂಜು ಕರೆನ್ನವರ, ಶಿವಶರಣಪ್ಪ ವಾಡಿ, ಕೆ. ನಾಗರಾಜ್ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...