ಬೆಂಗಳೂರು | ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು; ನಿವಾಸಿಗಳ ಆಕ್ರೋಶ

Date:

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಬೆಂಗಳೂರಿನ ಬಹುತೇಕ ಕಡೆ ರಸ್ತೆಗಳಿಗೆ ಟಾರು ಹಾಕಲಾಗಿತ್ತು. ಇದೀಗ ಟಾರು ಕಿತ್ತು ಬರುತ್ತಿದ್ದು, ರಸ್ತೆಯ ತುಂಬ ಗುಂಡಿಗಳು ನಿರ್ಮಾಣವಾಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್‌ಎಎಲ್‌ ವಾರ್ಡ್‌ನ ವರ್ತೂರು, ವೈಟ್‌ಫೀಲ್ಡ್‌ ಹಾಗೂ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿದ್ದು, ಟಾರು ಕಿತ್ತು ಹೋಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ.

“ವರ್ತೂರು-ಬಳಗೆರೆ ಹಾಗೂ ಬಳಗೆರೆ ಪಾಣತ್ತೂರು ಮುಖ್ಯರಸ್ತೆಯಲ್ಲಿ ಗುಂಡಿಗಳು ತುಂಬಿವೆ. ಕಳಪೆ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಬಾಕಿ ಬಿಲ್ ಪಾವತಿ ಮಾಡುವುದನ್ನು ತಡೆಹಿಡಿಯಬೇಕು” ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವರ್ತೂರು ಸಮೀಪದ ಆದಿತ್ಯ ಫ್ರಾಂಡೋಸೊ ಅಪಾರ್ಟ್‌ಮೆಂಟ್‌ನ ನಿವಾಸಿಯೊಬ್ಬರು ಮಾತನಾಡಿ, “ವಿಧಾನಸಭೆ ಚುನಾವಣೆ ಮುನ್ನವೇ ಟಾರ್‌ ಹಾಕಲಾಗಿದ್ದು, ಎರಡು ತಿಂಗಳಲ್ಲೇ ವರ್ತೂರು ಸಂಪರ್ಕಿಸುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಗುಂಡಿಗಳನ್ನು ಬೇಗನೆ ಮುಚ್ಚಬೇಕು. ಇಲ್ಲದಿದ್ದರೆ, ಚಳಿಗಾಲ ಮತ್ತು ಬೇಸಿಗೆ ಕಾಲದಲ್ಲಿ ಧೂಳಿನ ಸಂಬಂಧಿತ ಸೋಂಕುಗಳು ಹೆಚ್ಚಾಗುತ್ತವೆ” ಎಂದರು.

“ರಸ್ತೆ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಹಣ ಪಾವತಿಯಾಗದಂತೆ ಹಾಗೂ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್‌ ಚಂದ್ರ ಅವರಿಗೆ ಮನವಿ ಸಲ್ಲಿಸಲಾಗುವುದು. ಸಂಬಂಧಪಟ್ಟ ಗುತ್ತಿಗೆದಾರರು ರಸ್ತೆಗಳನ್ನು ಬೇಗನೆ ಸರಿಪಡಿಸಬೇಕು. ಸೊರಹುಣ್ಸೆ ಮುಖ್ಯರಸ್ತೆ, ಹಲಸಹಳ್ಳಿ ಮುಖ್ಯರಸ್ತೆ, ಬಳಗೆರೆ-ಪಾಣತ್ತೂರು ರಸ್ತೆ, ಬಳಗೆರೆ-ಗುಂಜೂರು ರಸ್ತೆಗಳಲ್ಲಿ ಇತ್ತೀಚೆಗೆ ಡಾಂಬರೀಕರಣ ಮಾಡಲಾಗಿದೆ” ಎಂದು ವರ್ತೂರಿನ ನಿವಾಸಿ ಜಗದೀಶ್‌ ರೆಡ್ಡಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಸ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯೊಬ್ಬನ ವಿರುದ್ಧ ದೂರು ದಾಖಲು

“ಆರ್ಟಿರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗುತ್ತಿರುವ ಬಗ್ಗೆ ಹೆಚ್ಚಿನ ದೂರುಗಳು ಬಂದಿವೆ. ಬಿಡಬ್ಲ್ಯುಎಸ್‌ಎಸ್‌ಬಿಯ ಕಾಮಗಾರಿಗಳಿಂದಾಗಿ ಈ ಸಮಸ್ಯೆ ಉಂಟಾಗಿದೆ” ಎಂದು ಮಹದೇವಪುರ ವಲಯದ ಕಾರ್ಯನಿರ್ವಾಹಕ ಎಂಜಿನಿಯರ್ ಮುನಿರೆಡ್ಡಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು,...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...