ಕಾರಿನ ಕನ್ನಡಿ ಒಡೆದು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಂಚಾರ ಪೊಲೀಸರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಕನ್ನಡಿಯನ್ನು ಒಡೆದು ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬೆಂಗಳೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ಉಂಟಾಗುವ ಸಂಚಾರ ಉಲ್ಲಂಘನೆಗಳನ್ನು ನಿಯಮಿತವಾಗಿ ಪೋಸ್ಟ್ ಮಾಡುವ @3rdEyeDude ಎಂಬ ಟ್ವಿಟರ್‌ ಖಾತೆ ಬಳಕೆದಾರರು, ನವೆಂಬರ್ 5 ರಂದು ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಸಂಜೆ 5.07 ರ ಸುಮಾರಿಗೆ ಡ್ಯಾಶ್‌ಕ್ಯಾಮ್‌ನಿಂದ ಸೆರೆಹಿಡಿಯಲಾದ ವೀಡಿಯೊವನ್ನು ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ಕಾರಿನ ಕನ್ನಡಿ ಒಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಕೆಂಪು ಹ್ಯುಂಡೈ ಕಾರಿನ ಚಾಲಕ ತನ್ನ ಪಾಡಿಗೆ ತಾನು ಕಾರು ಚಾಲನೆ ಮಾಡಿಕೊಂಡು ಮುಂದೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ತ್ರಿಬಲ್ ರೈಡ್‌ನ ಬೈಕ್‌ನಲ್ಲಿ ಓರ್ವ ಯುವಕ ಕಾರಿನ ಎಡ ಕನ್ನಡಿಯನ್ನು ತಿರುಗಿಸಿ, ಮಿರರ್‌ಗೆ ಹೊಡೆದಿದ್ದಾನೆ. ಈ ಮೂರು ಕಿಡಿಗೇಡಿಗಳು ಪುಂಡಾಟ ಮೆರೆದಿರುವ ದೃಶ್ಯ ಮತ್ತೊಂದು ಕಾರಿನ್ ಡ್ಯಾಶ್‌ಕ್ಯಾಮರಾದಲ್ಲಿ ಸೆರೆಯಾಗಿದೆ.

“19 ಸಾವಿರ ದಂಡ ಬಾಕಿಯಿರುವ ಟ್ರಿಪಲ್ ರೈಡಿಂಗ್ ದ್ವಿಚಕ್ರ ವಾಹನದಲ್ಲಿರುವ ವ್ಯಕ್ತಿಯೋರ್ವ ಕಾರಿನ ಕನ್ನಡಿಯನ್ನು ಒಡೆದಿದ್ದಾನೆ. ಈ ಕೃತ್ಯ ಎಸಗಲು ಅವರನ್ನು ಪ್ರಚೋದಿಸಿದ್ದು ಏನು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಇದು ಕಾನೂನುಬಾಹಿರವಾಗಿದೆ” ಎಂದು ಬಳಕೆದಾರರು ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಾರ್ ಮಿರರ್ ಹೊಡೆದ ಕೃತ್ಯ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ. ವಿಡಿಯೋ ಪೋಸ್ಟ್ ಮಾಡಿದ ಸುಮಾರು ಎರಡು ಗಂಟೆಗಳ ನಂತರ ಸ್ಕೂಟರ್ (ಕೆಎ 05 ಎಲ್ಎಲ್ 6204) ಅನ್ನು ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ.

“ಸ್ಕೂಟರ್ ಮಾಲೀಕರನ್ನು ಜಯನಗರದಲ್ಲಿ ವಾಸವಾಗಿರುವ ಯೆಲ್ಲಮ್ಮ ಎಂದು ಗುರುತಿಸಲಾಗಿದೆ. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುವ ಆಕೆಯ 21 ವರ್ಷದ ಮಗ ರೋಹಿತ್ ಕನ್ನಡಿ ಒಡೆದ ವ್ಯಕ್ತಿ ಎಂದು ಗುರುತಿಸಲಾಗಿದೆ” ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

“ಪ್ರಕರಣವು ಇನ್ನೂ ತನಿಖೆಯಲ್ಲಿದೆ. ಆರೋಪಿ ತಾನು ಕೃತ್ಯ ಎಸಗಿದಾಗ ಕುಡಿದಿದ್ದಾಗಿ ಹೇಳಿಕೊಂಡಿದ್ದಾನೆ. ಸ್ಕೂಟರ್ ವಿರುದ್ಧ ಸಂಚಾರ ನಿಯಮ ಉಲ್ಲಂಘನೆಯ 39 ಪ್ರಕರಣಗಳು ದಾಖಲಾಗಿದ್ದು, ₹19,500 ದಂಡವಿದೆ. ಇದೀಗ ಈ ವೀಡಿಯೋವನ್ನು ಆಧರಿಸಿ ಎರಡು ಹೊಸ ನಿಯಮಗಳು ಸೇರಿದಂತೆ 41 ಸಂಚಾರ ಉಲ್ಲಂಘನೆಗಳಿಗಾಗಿ ಒಟ್ಟು ₹21,500 ಪಾವತಿಸಬೇಕು. ಆರೋಪಿಗಳ ವಿರುದ್ಧ ಐಪಿಸಿ ಮತ್ತು ಮೋಟಾರು ವಾಹನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಈ ಪ್ರಕರಣವನ್ನು ಕಾನೂನು ಸುವ್ಯವಸ್ಥೆ ಪೊಲೀಸರಿಗೆ ಹಸ್ತಾಂತರಿಸಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಐಸಿಎಂಆರ್‌ಗೆ ಆಮ್ ಆದ್ಮಿ ಪಕ್ಷ ದೂರು

ರೋಹಿತ್ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನಿಬ್ಬರು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್ ಕಾಮಕೃತ್ಯ | ಹಾಸನಕ್ಕೆ ಸೀಮಿತವಾ? ರಾಜ್ಯ ಮತದಾರರ ಕರ್ತವ್ಯವೇನು?

ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್‌ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ....

ಹಾಸನ | ಪೆನ್‌ಡ್ರೈವ್ ಪ್ರಕರಣ; ಪ್ರಭಾವಿ ಕುಟುಂಬದ ಅಟ್ಟಹಾಸ ಮಟ್ಟಹಾಕಲು ಒಕ್ಕಲಿಗ ಸಮುದಾಯ ಮುಂದಾಗುವುದೇ?

ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ...

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....