ಬಿಬಿಎಂಪಿ | ನಾಮಫಲಕದಲ್ಲಿ ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ 20,977 ನೋಟಿಸ್‌ ಜಾರಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಈ ಹಿನ್ನೆಲೆ, ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ ಪಾಲಿಕೆ 20,977 ನೋಟಿಸ್‌ ಜಾರಿ ಮಾಡಿದೆ.

“ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಫೆ.28 ರೊಳಗೆ ಕಾನೂನಿನ ನಿಯಮದಂತೆ ಶೇ.60ರಷ್ಟು ಕನ್ನಡ ಬಳಕೆ ಮಾಡಿರಬೇಕು. ಜ.15ರೊಳಗೆ ಸರ್ವೆ ಕಾರ್ಯ ಮುಗಿಸಿ, ಕನ್ನಡ ಬಳಕೆ ಮಾಡದ ವಾಣಿಜ್ಯ ಅಂಗಡಿಗಳಿಗೆ ನೋಟಿಸ್ ನೀಡಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ಮುಖ್ಯ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ವಲಯಗಳ ಆರೋಗ್ಯಾಧಿಕಾರಿಗಳು ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ನೀಡುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ನೀಡಲಾಗುತ್ತಿದೆ. ಈಗಾಗಲೇ, ಶೇ 80ರಷ್ಟು ಮಾಲೀಕರಿಗೆ ನೋಟಿಸ್‌ ನೀಡಲಾಗಿದ್ದು, ಈ ವಾರದಲ್ಲಿ ಎಲ್ಲರಿಗೂ ನೋಟಿಸ್‌ ತಲುಪುತ್ತದೆ’’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಸೈಯದ್‌ ಸಿರಾಜುದ್ದೀನ್‌ ಮದನಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜನವರಿ 18ರಂದು ‘ಬಿಲ್ಕಿಸ್ ಬಾನು ಜೊತೆ ನಾವಿದ್ದೇವೆ’ ಕಾರ್ಯಕ್ರಮ

“ನಗರದಲ್ಲಿರುವ ಮುಖ್ಯರಸ್ತೆಗಳಲ್ಲಿ ಶೇ.60ರಷ್ಟು ಕನ್ನಡ ಪದ ಬಳಕೆಯ ನಾಮಫಲಕಗಳನ್ನು ಬಳಸಿಲ್ಲ. ಹೀಗಾಗಿ, ಪಾಲಿಕೆ ವಲಯದ ಎಲ್ಲ ರಸ್ತೆ, ವಸತಿ ಪ್ರದೇಶಗಳಲ್ಲಿರುವ ಮಳಿಗೆ, ವಾಣಿಜ್ಯ ಚಟುವಟಿಕೆಯ ಅಂಗಡಿಗಳಿಗೆ ನೋಟಿಸ್ ನೀಡಲಾಗುತ್ತಿದೆ. 15 ದಿನದಲ್ಲಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸುವಂತೆ ಸೂಚಿಸಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | 6.325 ಕೆಜಿ ಗಾಂಜಾ ವಶ; ಆರೋಪಿ ಬಂಧನ

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ‌ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು...

ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು,...

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...