ರಾಜ್ಯದಲ್ಲಿ ಸೋನಿಯಾ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ತರುತ್ತಿದ್ದೀರಾ? ಬಿ ಸಿ ನಾಗೇಶ್‌ ಕಿಡಿ

Date:

  • ಎನ್‌ಇಪಿ ಅನ್ನು ‘ನಾಗಪುರ ಶಿಕ್ಷಣ ನೀತಿ’ ಎಂದಿದ್ದ ಕಾಂಗ್ರೆಸ್‌
  • ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪ್ರಶ್ನೆ ಮುಂದಿಟ್ಟ ನಾಗೇಶ್

ಎನ್‌ಇಪಿಯನ್ನು ಅನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ (ಸೋನಿಯಾ ಶಿಕ್ಷಣ ನೀತಿ)ಯನ್ನು ಜಾರಿಗೆ ತರುತ್ತಿದ್ದೀರಾ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಕುಟುಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿ, ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ರದ್ದುಗೊಳಿಸಿ, ಕಡಿಮೆ ಸಮಯದಲ್ಲಿ ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿಯನ್ನು ತರಲು ಪ್ಲಾನ್ ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳುವೆ ಎಂದು ಹೇಳಿದ್ದಾರೆ.

ಬಿ ಸಿ ನಾಗೇಶ್‌ ಪ್ರಶ್ನೆಗಳು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಡವ, ಶ್ರೀಮಂತ ಎನ್ನದೇ ಸರ್ವರಿಗೂ ಕೌಶಲ್ಯ ಆಧಾರಿತ, ‘ಸಮಾನ ಗುಣಮಟ್ಟ’ದ ಶಿಕ್ಷಣ ನೀಡುವ ಅಂಶಗಳನ್ನು ಎನ್‌ಇಪಿ ಒಳಗೊಂಡಿದೆ. ಬಡವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಬಾರದೇ? ಸಮಾನ ಶಿಕ್ಷಣ ನೀಡಿದರೆ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಬಾಗಿಲು ಹಾಕಬೇಕಾಗಬಹುದು ಎಂಬ ಆತಂಕವೇ?

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಎನ್ಇಪಿ ರೂಪಿಸಲಾಗಿದೆ ಎಂಬ ತಮ್ಮ ಹೇಳಿಕೆಯು ಅತ್ಯಂತ ಬೇಜವಾಬ್ದಾರಿಯುತ ಹಾಗೂ ರಾಜಕೀಯ ಪ್ರೇರಿತ ಹೇಳಿಕೆಯಾಗಿದೆ. ಅಸಲಿಗೆ ರಾಜ್ಯದ ಡಿಎಸ್‌ಇಆರ್‌ಟಿ, ಅನೇಕ ಶಿಕ್ಷಣ ತಜ್ಞರು, ಕುಲಪತಿಗಳು, ಪಾಲಕರು, ಮಕ್ಕಳ ವೈದ್ಯರು, ತಜ್ಞರಿಂದ ಅಭಿಪ್ರಾಯವನ್ನು ಸಂಗ್ರಹಿಸಿ ಸುದೀರ್ಘ ಸಮಾಲೋಚನೆ ನಡೆಸಿ ಎನ್‌ಇಪಿಯನ್ನು ರೂಪಿಸಲಾಗಿದೆ ಎಂಬುದನ್ನು ನಾನು ಸಾಬೀತುಪಡಿಸುತ್ತೇನೆ. ಸವಾಲು ಸ್ವೀಕರಿಸುವಿರಾ?

ವಿಜ್ಞಾನಿಗಳು, ಶಿಕ್ಷಣ ತಜ್ಞರು, ಮಕ್ಕಳ ತಜ್ಞರು, ಶಿಕ್ಷಕ ಸಮುದಾಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚಿಸಿ ಹತ್ತು ವರ್ಷ ಕಾಲ ಅಧ್ಯಯನ ನಡೆಸಿ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದುಗೊಳಿಸಲು ಕಾರಣವೇನು? ಅದರಲ್ಲಿರುವ ಲೋಪ – ದೋಷಗಳು ಏನು ಎಂಬುದನ್ನು ಅಧಿಕೃತ ದಾಖಲೆಗಳ ಮೂಲಕ ರಾಜ್ಯದ ಜನರಿಗೆ ತಿಳಿಸುವಿರಾ?

ಎನ್‌ಇಪಿಯಲ್ಲಿ ಆಯಾ ರಾಜ್ಯಗಳ ಭಾಷೆ/ ಮಾತೃ ಭಾಷೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲೂ ಇಂಗ್ಲೀಷೇತರ ಭಾಷೆಯಲ್ಲಿ ಕಲಿತು ಪದವಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಎನ್‌ಇಪಿಯಲ್ಲಿ ಈ ರೀತಿ ವೈವಿಧ್ಯಮಯ ಕಲಿಕೆಗೆ ಅವಕಾಶ ಕಲ್ಪಿಸಿರುವುದರಿಂದ ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ನೀಡುತ್ತಿರುವ ಇಂಗ್ಲೀಷ್ ಶಿಕ್ಷಣಕ್ಕೆ ಧಕ್ಕೆಯಾಗುತ್ತದೆ ಎಂಬ ಭಯ ಕಾಡುತ್ತಿದೆಯೇ?

ಸಿಬಿಎಸ್ಇ ಶಾಲೆಗಳಲ್ಲಿ ಈಗಾಗಲೇ ಎನ್‌ಇಪಿ ಅನುಷ್ಠಾನವಾಗಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ಹಾಗೂ ಇನ್ನಿತರ ಬಲಾಢ್ಯ ರಾಜಕಾರಣಿಗಳ ಒಡೆತನದಲ್ಲಿರುವ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳಲ್ಲಿನ ಎನ್‌ಇಪಿ ಆಧಾರಿತ ಸಿಬಿಎಸ್‌ಇ ಪಠ್ಯಕ್ರಮದ ಬದಲು ಉದ್ದೇಶಿತ ರಾಜ್ಯ ಶಿಕ್ಷಣ ನೀತಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲಾಗುವುದೇ?

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...