ಹರಪನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಸಿಎಂಎಸ್) ಪ್ರಸಕ್ತ ಸಾಲಿಗೆ 4,87,364.45 ಲಕ್ಷ ರೂ. ಲಾಭವಾಗಿದೆ ಎಂದು ಸಂಘದ ಅಧ್ಯಕ್ಷೆ ಎಚ್. ನೇತ್ರಾವತಿ ಹೇಳಿದರು.
ಹರಪನಹಳ್ಳಿಯಲ್ಲಿ ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. “ಮುಂದಿನ ದಿನಗಳಲ್ಲಿ ಆಹಾರ ಧಾನ್ಯ ಮತ್ತು ಸಗಟು ನಿಯಂತ್ರಿತ ಪಡಿತರ ಹಾಗೂ ಇತರೆ ವ್ಯವಹಾರವನ್ನು ಆರಂಭಿಸಲು ಪ್ರಯತ್ನಿಸಲಾಗುವುದು” ಎಂದರು.
“ರೈತರಿಗೆ ರಸಗೊಬ್ಬರ ಪೂರೈಕೆಗಾಗಿ ಹೆಚ್ಚಿನ ಪ್ರಮಾಣದಲ್ಲಿ ವ್ಯವಹರಿಸಬೇಕಾಗಿದೆ. ಸಂಘದ ಎಲ್ಲ ಸದಸ್ಯರು ಮತ್ತು ತಾಲೂಕಿನ ಎಲ್ಲ ರೈತರು ಸಂಘದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಖರೀದಿ ಮಾಡಲು ವಿನಂತಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.
“ಸಂಘದಲ್ಲಿ ರೈತರಿಗೆ ಮತ್ತು ಸದಸ್ಯರ ಅನುಕೂಲಕ್ಕಾಗಿ ಬಂಗಾರದ ಆಭರಣಗಳ ಮೇಲೆ ಸಾಲ ನೀಡಲು ಪ್ರಾರಂಬಿಸಲಾಗವುದು. ಸರ್ಕಾರದ ಷೇರು ಬಂಡವಾಳ ಸರಿದೂಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಿ ಷೇರು ಹಣವನ್ನು ಸಂಘದಲ್ಲಿ ತೊಡಗಿಸಬೇಕು” ಎಂದರು.
ಸಭೆಯಲ್ಲಿ ಸಂಘದ ಪ್ರಭಾರಿ ಕಾರ್ಯದರ್ಶಿ ಎಚ್.ತಿರುಪತಿ ಬಳಿಕ ಹಿರಿಯ ಸದಸ್ಯ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಕುಲಮಿ ಅಬ್ದುಲ್ಲಾ, ನಿರ್ದೇಶಕರಾದ ಬಿ.ಕೆ ಪ್ರಕಾಶ, ಎಚ್.ತಿಮ್ಮನಾಯ್ಕ, ಎಲ್.ಬಿ.ಹಾಲೇಶನಾಯ್ಕ, ಪಿ.ಪ್ರೇಮಕುಮಾರ, ಗಿಡ್ಡಳ್ಳಿ ನಾಗರಾಜ, ತಳವಾರ ಮಂಜಪ್ಪ, ಬಿ.ರೇವಣಸಿದ್ದಪ್ಪ, ಎಂ.ವಿ.ಕೃಷ್ಣಕಾAತ, ಕೆ.ವಿರುಪಾಕ್ಷಪ್ಪ, ವಿ.ಜಿ. ಪ್ರಕಾಶಗೌಡ, ಯು.ಹನುಮಂತಪ್ಪ, ಮಂಜುಳಾ ಮೂರ್ತಿ ಹಾಗೂ ಚಿಕ್ಕೇರಿ ಬಸಪ್ಪ, ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ, ಡಿ.ಅಬ್ದುಲ್ ರಹಿಮಾನ್ ಸಾಹೇಬ್, ಆಲಮರಸಿಕೇರಿ ಪರುಶುರಾಮಪ್ಪ, ಕಂಚಿಕೇರಿ ಜಯಲಕ್ಷೀ. ಗುಂಡಗತ್ತಿ ನೇತ್ರಾವತಿ, ಸೋಗಿ ಇಬ್ರಾಹಿಂ, ಶ್ರಿಕಾಂತ, ಶಿವಮೂರ್ತಿಯ್ಯ ತಿರುಕಪ್ಪ, ಪಿ.ಪರುಶುರಾಮ, ಸೇರಿದಂತೆ ಇತರರು ಇದ್ದರು.