ಮೆಟ್ರೋದಲ್ಲಿ ‘ಅಮ್ಮ’ ಎಂದು ಕಿರುಚಿದ ‘ರೀಲ್ ಸ್ಟಾರ್’: ‘ಅಮ್ಮನೊಂದಿಗೆ ಸ್ಟೇಷನ್‌ಗೆ ಬಾ’ ಎಂದ ಪೊಲೀಸರು!

Date:

“ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ” ಎಂದು ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಯುವಕನೋರ್ವನಿಗೆ ಪೊಲೀಸರು, “ಸ್ಟೇಷನ್‌ಗೆ ಅಮ್ಮನೊಂದಿಗೆ ಬಾ” ಎಂದು ಕರೆಸಿಕೊಂಡ ಪ್ರಸಂಗ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ.

ಬೆಂಗಳೂರು ಮೆಟ್ರೋದಲ್ಲಿ ಅನುಚಿತ ವರ್ತನೆ ಮತ್ತು ಭಯ ಹುಟ್ಟಿಸುವ ವೀಡಿಯೊಗಳನ್ನು ಸೃಷ್ಟಿಸಿದ್ದಕ್ಕಾಗಿ ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಬೆಂಗಳೂರಿನ ಗೆದ್ದಲಹಳ್ಳಿ ನಿವಾಸಿ, 27 ವರ್ಷದ ಸಂತೋಷ್ ಕುಮಾರ್ ಎಂಬಾತ, ಅಮ್ಮನೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿ ಕ್ಷಮೆಯಾಚಿಸಿದ್ದಾನೆ. ಅಲ್ಲದೇ, ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುವುದಿಲ್ಲ ಎಂದು ಲಿಖಿತ ರೂಪದಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸಂತೋಷ್ ಕುಮಾರ್ ಎಂಬಾತ ಇನ್ಸ್ಟಾಗ್ರಾಂನಲ್ಲಿ @Yash Gowda 0721 ಎಂಬ ಖಾತೆ ಹೊಂದಿದ್ದು, 1.62 ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾನೆ. ಈತ ಎಸೆಸೆಲ್ಸಿವೆರೆಗೂ ವಿದ್ಯಾಭ್ಯಾಸ ಮಾಡಿದ್ದು, ನಿರುದ್ಯೋಗಿಯಾಗಿದ್ದ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದ ಈತ, ವಿಡಿಯೋವೊಂದನ್ನು ಮಾಡಿ ಅದರಲ್ಲಿ, ‘ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ’ ಎಂದು ಬೊಬ್ಬೆ ಹೊಡೆದಿದ್ದಲ್ಲದೇ, ಸಮೀಪದಲ್ಲೇ ನಿಂತಿದ್ದ ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದ್ದಾನೆ. ಬಳಿಕ ಆ ವಿಡಿಯೋವನ್ನು ರೀಲ್ಸ್‌ ಮಾಡಿ ಹಂಚಿಕೊಂಡಿದ್ದಾನೆ. ಇದು ವೈರಲಾಗಿದೆ. ಇದು ಮೆಟ್ರೋ ಅಧಿಕಾರಿಗಳ ಗಮನಕ್ಕೂ ಬಂದಿದೆ.

ಈ ವಿಡಿಯೋದಲ್ಲಿ ಯುವಕನ ವಿವರಗಳು ಇಲ್ಲದ್ದರಿಂದ ಆತನ ಚಟುವಟಿಕೆಗಳ ಮೇಲೆ ಮೆಟ್ರೋ ಅಧಿಕಾರಿಗಳು ನಿಗಾ ಇರಿಸಿದ್ದರು. ಈ ನಡುವೆ ಬೈಕೊಂದರಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದನ್ನು ಗಮನಿಸಿದ ಅಧಿಕಾರಿಗಳು, ವಾಹನದ ಸಂಖ್ಯೆಯನ್ನು ಸೆರೆಹಿಡಿದು ಸಂತೋಷ್‌ನ ವಿಳಾಸದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ಕಳೆದ ಶುಕ್ರವಾರ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಆರಂಭದಲ್ಲಿ ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದ ಪೊಲೀಸರು, ಮೆಟ್ರೋ ಭದ್ರತಾ ಅಧಿಕಾರಿ ಪುಟ್ಟ ಮಾದಯ್ಯ ತನಿಖೆಗೆ ಒತ್ತಾಯಿಸಿದ ಬಳಿಕ ಕ್ರಮ ಕೈಗೊಂಡಿದ್ದಾರೆ. ಬಳಿಕ ಪೊಲೀಸರು ಸಂತೋಷ್ ಕುಮಾರ್ ಅವರನ್ನು ತನ್ನ ತಾಯಿಯೊಂದಿಗೆ ಬರುವಂತೆ ಸೂಚಿಸಿದ್ದರಿಂದ ಕಳೆದ ಶನಿವಾರ ಠಾಣೆಗೆ ತೆರಳಿದ್ದಾರೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಅಸಭ್ಯವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಲ್ಲದೇ, ಲಿಖಿತ ರೂಪದಲ್ಲಿ ಕ್ಷಮಾಪಣಾ ಪತ್ರವನ್ನು ಉಪ್ಪಾರಪೇಟೆ ಪೊಲೀಸರು ಬರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೆಟ್ರೋ ಕಾಯಿದೆಯ ಸೆಕ್ಷನ್ 59(1) ರ ಅಡಿಯಲ್ಲಿ, ಸಂತೋಷ್ ಕುಮಾರ್ ವಿರುದ್ಧ ಮೆಟ್ರೋ ರೈಲಿನೊಳಗೆ ಅನುಚಿತ ವರ್ತನೆಗಾಗಿ ಪ್ರಕರಣ ದಾಖಲಿಸಲಾಗಿತ್ತು. 500 ರೂಪಾಯಿ ದಂಡ ಕಟ್ಟಿದ ನಂತರ, ಮೆಟ್ರೋ ಅಧಿಕಾರಿಗಳು ಎಚ್ಚರಿಕೆ ನೀಡಿ, ಕಳುಹಿಸಿದ್ದಾರೆ. ಇದಲ್ಲದೆ, ಬೆಂಗಳೂರು ಮೆಟ್ರೋಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ತೆಗೆದುಹಾಕಲು ಸೂಚನೆ ನೀಡಿದ್ದು, ಅದಕ್ಕೆ ‘ರೀಲ್ ಸ್ಟಾರ್’ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ, ಜಾತ್ಯತೀತ ಸರ್ಕಾರ ರಚನೆಯಾಗಬೇಕು: ಸಂವಿಧಾನ ರಕ್ಷಣಾ ವೇದಿಕೆ

ಪ್ರಜಾಪ್ರಭುತ್ವ ಉಳಿಸಿ - ಸಂವಿಧಾನವನ್ನು ರಕ್ಷಿಸಲು, ಈ ಬಾರಿ ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ʼಬ್ಯಾರಿ ಸೆಂಟ್ರಲ್‌ ಕಮಿಟಿ ಬೆಂಗಳೂರುʼ ರಚನೆ : ಅಧ್ಯಕ್ಷರಾಗಿ ಶಬೀರ್‌ ಬ್ರಿಗೇಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...