ಭಗತ್‌ ಸಿಂಗ್‌ ಯುವ ಜನಾಂಗದ ಕ್ರಾಂತಿಯ ಚಿಲುಮೆ

Date:

“ನಾವು ಪ್ರಭುತ್ವದ ವಿರುದ್ಧ ಸಮರ ಸಾರಿದ್ದೇವೆ. ಹಾಗಾಗಿ ಯುದ್ಧ ಖೈದಿಗಳಾಗಿದ್ದೇವೆ ಎಂದು ಹೇಳಲಿಚ್ಛಿಸುತ್ತೇನೆ. ನಮ್ಮನ್ನು ಯುದ್ಧ ಖೈದಿಗಳಂತೆಯೇ ಪರಿಗಣಿಸಲು ಆಗ್ರಹಿಸುತ್ತೇವೆ. ಅರ್ಥಾತ್ ನಮ್ಮನ್ನು ಗಲ್ಲಿಗೇರಿಸುವ ಬದಲು ನೇರವಾಗಿ ಗುಂಡಿಟ್ಟು ಕೊಲ್ಲುವಂತೆ ಕೋರುತ್ತೇವೆ.

ಭಾರತದ ಇತಿಹಾಸದಲ್ಲಿ ಎಂದಿಗೂ ಚಿರಸ್ಥಾಯಿಯಾಗಿ ಉಳಿಯುವ ಅದಮ್ಯ ಚೇತನವೇ ಭಗತ್ ಸಿಂಗ್. ಕೇವಲ 23 ವಯಸ್ಸಿನಲ್ಲಿ ದೇಶಕ್ಕಾಗಿ ನೇಣುಗಂಬ ಏರಿದ ಏಕೈಕ ಸ್ವಾತಂತ್ರ್ಯ ಸಂಗ್ರಾಮದ ವೀರ, ಭಗತ್ ಸಿಂಗ್ ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾಗಿದ್ದಾನೆ. ಭಗತ್ ‌ಸಿಂಗ್ ನ ಆದರ್ಶಗಳನ್ನು ಕೇವಲ ಹುತಾತ್ಮ ‌ಸ್ವಾತಂತ್ರ್ಯ ಸಂಗ್ರಾಮಕ್ಕೆ ಸೀಮಿತಗೊಳಿಸುವ ಬದಲು ಆತನು ಪ್ರತಿಪಾದಿಸಿದ ಸಿದ್ಧಾಂತವನ್ನು ಇಂದಿನ ಸಮಾಜ ಅರ್ಥೈಸಿಕೊಳ್ಳುವುದು ತುಂಬಾ ಮುಖ್ಯವಾಗಿದೆ.

“ವ್ಯಕ್ತಿಗಳನ್ನು ಕೊಲ್ಲಬಹುದು, ಆದರೆ ಅವರ ವಿಚಾರಗಳನ್ನಲ್ಲ” ಎಂದು ನುಡಿದ ಭಗತ್‍ ಸಿಂಗ್‍ ಇಂದು ನಮ್ಮೊಂದಿಗೆ ಇಲ್ಲ. ಆದರೆ ಆತನೇ ಹೇಳಿದಂತೆ ಭಗತ್‌ ಸಿಂಗ್ ವಿಚಾರ, ಆದರ್ಶ ಸಿದ್ಧಾಂತ, ಕ್ರಾಂತಿಯ ವಿಚಾರಧಾರೆ ಮಾತ್ರ ಇಂದಿಗೂ ಜೀವಂತವಾಗಿ ನೆಲೆಯೂರಿವೆ. ಭಗತ್ ಸಿಂಗ್ ನನ್ನು ನಾವು ಕೇವಲ ‘ದೇಶಪ್ರೇಮಿ’ ‘ಹುತಾತ್ಮ’ ಎಂದು ಬಿಂಬಿಸುವ ಮೂಲಕ ಆರಾಧನೆಯಷ್ಟೇ ಮಾಡುವುದಲ್ಲ, ಭಗತ್ ಸಿಂಗ್ ಎಂದರೆ ಅದೊಂದು ಕ್ರಾಂತಿಯ ಚಿಲುಮೆ, ಅಮೋಘ ಶಕ್ತಿ ಎಂದು ಅರಿಯಬೇಕಿದೆ. ಉನ್ನತ ಧ್ಯೇಯ ಮತ್ತು ಆದರ್ಶ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿವೆ. ಆತನ ಕ್ರಾಂತಿಕಾರಿ ಚಿಂತನೆಗಳನ್ನು ಮನಗಂಡು ನಾವೆಲ್ಲರೂ ಮುನ್ನಡೆಯಬೇಕಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಹಿದ್ ಭಗತ್ ಸಿಂಗ್, 28ನೆಯ ಸೆಪ್ಟೆಂಬರ್ 1907ರಂದು ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಮೂರನೆಯ ಮಗನಾಗಿ ಜನಿಸಿದನು. ದೇಶಪ್ರೇಮದ ಹಿನ್ನೆಲೆಯುಳ್ಳ ಕ್ರಾಂತಿಕಾರಿ ವಿಚಾರಧಾರೆಯ ಕುಟುಂಬದಲ್ಲಿ ಹುಟ್ಟಿದ ಭಗತನಿಗೆ ಹುಟ್ಟುತ್ತಲೇ ದೇಶಪ್ರೇಮದ ಕಿಚ್ಚು ಮೊಳಕೆಯೊಡೆಯಿತು. ಅದು 1919ರ ವೇಳೆ ಜಲಿಯಾನ್ ವಾಲಾಬಾಗದಲ್ಲಿ ಸಂಭವಿಸಿದ ಹತ್ಯಾಕಾಂಡ ಭಗತ್ ಸಿಂಗ್ ನಿಗೆ ಅತಿಯಾಗಿ ಕಾಡಿತ್ತು. ಅಂದಿನ ಆ ಘಟನೆ ಭಗತ್ ಸಿಂಗ್ ನನ್ನು ಒಬ್ಬ ಅಪ್ರತಿಮ ಹೋರಾಟದ ನಾಯಕನಾಗಿ ರೂಪಿಸಿದ್ದು, ಮುಂದೆ ಬ್ರಿಟೀಷ್ ರಿಗೆ ಸಿಂಹಸ್ವಪ್ನವಾಗಿ, ಭವಿಷ್ಯ ಭಾರತಕ್ಕಾಗಿ, ಶೋಷಣೆ ಮುಕ್ತ ಸಮಾಜಕ್ಕಾಗಿ ಭಗತ್ ಸಿಂಗ್ ಮಿಡಿದಿರುವುದು ಸ್ಪಷ್ಟವಾಗಿ ತೋರುತ್ತದೆ. 

ಭಾರತದ ಸ್ವಾತಂತ್ರ್ಯ ಚಳವಳಿಗೆ ಬ್ರಿಟೀಷರ ವಿರುದ್ಧ ಸಮರ ಸಾರಿರುವ ಭಗತ್‍ಸಿಂಗ್, ಮತ್ತು ಆತನ ಸಂಗಾತಿಗಳಾದ ರಾಜಗುರು ಸುಖದೇವ್ ಮೊದಲಿಗರು. ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ಸಾಮ್ರಾಜ್ಯದ ವಿರುದ್ಧ ಹೋರಾಡಲಿಲ್ಲ, ಶಾಂತಿ ಮತ್ತು ಸೌಹಾರ್ದತೆಗಾಗಿ ಹೋರಾಡಿದ. “ಭಾರತದ ನೆಲದಲ್ಲಿ ಪ್ರಸ್ತುತ ಸಾಮಾಜಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿ ಸಮಾಜವಾದಿ ಗಣತಂತ್ರವನ್ನು ಸ್ಥಾಪಿಸುವವರೆಗೂ ನಮ್ಮ ಅವಿರತ ಹೋರಾಟ ದಿಟ್ಟತನದಿಂದ, ದೃಢತೆಯಿಂದ ಮತ್ತು ಅಪರಿಮಿತ ವಿಶ್ವಾಸದಿಂದ ನಡೆಯುತ್ತದೆ” ಎಂದು ಹೇಳುವ ಮೂಲಕ ಮೌಲಿಕ ಚಿಂತನೆಗಳು ಮಂಡಿಸಿದ. 

ಕ್ರಾಂತಿಯ ಮೂಲಕ ಸಾಮಾಜಿಕ ಬದಲಾವಣೆ ಬಯಸಿದ ಭಗತ್ ಸಿಂಗ್ ಕ್ರಾಂತಿ ಎಂದರೆ ಕ್ರಿಯೆ, ಹಾಗೂ ಪವಿತ್ರವಾದದ್ದು ಎಂದು ತಿಳಿದವನು. ಸಂಘಟಿತರಾಗಿ, ವ್ಯವಸ್ಥಿತವಾದ ಕಾರ್ಯ ಯೋಜನೆಯ ಮೂಲಕ ಉದ್ದೇಶಪೂರ್ವಕವಾಗಿ ಬದಲಾವಣೆ ತರುವುದನ್ನು ಕ್ರಾಂತಿ ಎನ್ನಲಾಗುತ್ತದೆ ಎಂದು ಹೇಳಿದನು. ಕ್ರಾಂತಿಕಾರಿಗಳು ಸಂಪೂರ್ಣ ಕ್ರಾಂತಿಗಾಗಿ ಹೋರಾಡುತ್ತೇವೆ. ಆದರೆ, ಸಂಪ್ರದಾಯವಾದಿಗಳು ಕ್ರಾಂತಿಕಾರಿ ಶಕ್ತಿಯನ್ನು ಭಂಗಗೊಳಿಸಿ ಹೋರಾಟವನ್ನು ವಿಫಲಗೊಳಿಸುತ್ತಾರೆ. ಹಾಗಾಗಿ ಇಂತಹ ಬಿಕ್ಕಟ್ಟಿನ ಸನ್ನಿವೇಶಗಳಲ್ಲಿ ನಾವು ಗೊಂದಲಕ್ಕೆ ಒಳಗಾಗದೇ ಧ್ಯೇಯವನ್ನು ಸಾಧಿಸಬೇಕು ಎಂದು ಎಚ್ಚರಿಸುತ್ತಾನೆ. 

ಇನ್ನೂ ಭಗತ್ ಸಿಂಗ್ ಒಬ್ಬ ನಾಸ್ತಿಕವಾದಿಯೇ? ಎಂಬುದನ್ನು ನಾವು ತಿಳಿದುಕೊಳ್ಳಬೇಕಿದೆ. ನಾನು ಆಸ್ತಿಕ ಹಾಗೂ ನಾಸ್ತಿಕ ಎಂಬ ಎರಡು ಗುಂಪಿಗೂ ಸೇರಿದವನಲ್ಲ. ನಾನು ಸರ್ವವ್ಯಾಪಿ, ಸರ್ವಶಕ್ತ, ಸ್ವರ್ವಾಂತರ್ಯಾಮಿ, ಸರ್ವಗ್ರಾಹಿ ದೇವರ ಅಸ್ತಿತ್ವವನ್ನೆ ನಿರಾಕರಿಸುತ್ತೇನೆಂದು ಹೇಳುತ್ತಾನೆ. ಮನುಷ್ಯ ಜೀವನದಲ್ಲಿ ದೇವರ ಶಿಕ್ಷೆ ಅಥವಾ ಉಡುಗೊರೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ನಮಗೆ ಬದುಕು ಮತ್ತು ಸಾವು ಭೌತಿಕ ನೆಲೆಯಲ್ಲಿ ಮಾತ್ರವೇ ಪ್ರಸ್ತುತ ಎನಿಸುತ್ತದೆ. “ದೇವರ ಸಾಮ್ರಾಜ್ಯದಲ್ಲಿ ಎಲ್ಲವೂ ಸೌಖ್ಯವಿದೆಯೇ?” ಎಂದು ಪ್ರಶ್ನಿಸುತ್ತಾ ನಾನು ನಾಸ್ತಿಕವಾದಿ ಹಾಗೂ ವಾಸ್ತವವಾದಿಯೂ ಹೌದು ಎನ್ನುವ ನಿರ್ಧಾರಕ್ಕೆ ಬರುತ್ತಾನೆ. 

“ನಾನು ನನ್ನ ಅಂತಿಮ ಕ್ಷಣಗಳು ಎದುರಾದಾಗ ನಾನು ದೇವರನ್ನು ನಂಬಲು ಆರಂಭಿಸಿದರೆ ನನ್ನ ನೈತಿಕ ಅಧಃಪತನ ಹಾಗೂ ಅವಮಾನದ ಸಂಕೇತವಾಗುತ್ತದೆ. ಇಂತಹ ಕ್ಷುಲ್ಲಕ ಸ್ವಾರ್ಥ ಉದ್ದೇಶಗಳಿಗೆ ನಾನು ದೇವರಿಗೆ ಪ್ರಾರ್ಥಿಸಲಾರೆ” ಎಂದು ಹೇಳುವ ಭಗತ್ ಸಿಂಗ್ ತಾನು ನಂಬಿರುವ ಸಿದ್ಧಾಂತಕ್ಕೆ ಕೊನೆಯವರೆಗೂ ಬದ್ಧನಾಗಿರುವುದನ್ನು ಗಮನಿಸಬಹುದು.

ಇಂದು ಭಗತ್ ಸಿಂಗ್ 116ನೇ ಜನ್ಮದಿನದ ಈ ಸಂದರ್ಭದಲ್ಲಿ ಭಗತ್ ಸಿಂಗ್ ನನ್ನು ನಾವು ಕೇವಲ ಹುತಾತ್ಮ ದೇಶಭಕ್ತ ಎಂದೇ ಬಿಂಬಿಸಿದ್ದೇವೆ. ಆತನ ಮೂಲ ತ್ವತ್ವಾದರ್ಶ ಸಿದ್ಧಾಂತಗಳು ಮೂಲೆಗುಂಪು ಮಾಡುವ ಹುನ್ನಾರದಿಂದ ಕೇವಲ ದೇಶಭಕ್ತಿಯ ಚೌಕಟ್ಟಿನಲ್ಲಿ ಪೂಜಿಸುತ್ತಿರುವುದು ವಿಪರ್ಯಾಸವೇ ಸರಿ. 

ಭಗತ್ ‌ಸಿಂಗ್, ರಾಜಗುರು ಹಾಗೂ ಸುಖದೇವ್ ಸೇರಿದಂತೆ ಅಸಂಖ್ಯಾತ ಸಂಗಾತಿಗಳನ್ನು ನಾವು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಆದರೆ ಇಂದಿನ ಯುವ ‌‌ಸಮುದಾಯವನ್ನು ಒಗ್ಗೂಡಿಸಿ ಕ್ರಾಂತಿಯ ಮಾರ್ಗದಲ್ಲಿ ಕೊಂಡೊಯ್ಯಬಲ್ಲ ಸಾಮರ್ಥ್ಯ ಇರುವುದು ಭಗತ್ ಸಿಂಗ್ ಚಿಂತನೆಗಳಲ್ಲಿ ಮಾತ್ರ. ಅಂದಿನ ‘ರಿಯಲ್ ಹೀರೋ’ ಗಳೇ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

ಭಗತ್‌ ಸಿಂಗ್‌ ಎಂಬ ಅದಮ್ಯ ಚೇತನಕ್ಕೆ ನಾವು ಗೌರವಿಸಿ, ಆದರ್ಶವಾಗಿ ಸ್ವೀಕರಿಸೋಣ. ಇಂಥ ಕ್ರಾಂತಿಕಾರಿ ಮಹಾತ್ಮ ಹುಟ್ಟಿದ ನೆಲದಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಸೌಭಾಗ್ಯ ಅಲ್ಲವೇ?

ಬಾಲಾಜಿ ಕುಂಬಾರ್
+ posts

ಕವಿ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಕವಿ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಬೇಡ್ಕರರ ಪ್ರಬುದ್ಧ ಭಾರತ ಮತ್ತು ಮೋದಿಯವರ ವಿಕಸಿತ ಭಾರತ

ರಾಜಕೀಯ ಸ್ವಾತಂತ್ರ್ಯಕ್ಕಿಂತ ಸ್ವತಂತ್ರ ಭಾರತದಲ್ಲಿ ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಪ್ರಜಾಸತ್ತೆಗಳನ್ನು...

ಹಿಂದುತ್ವಕ್ಕೆ ಬಲಿಯಾದ ಕುಲಾಲ ಮತ್ತು ಸಣ್ಣ ಸಮುದಾಯಗಳ ಪ್ರಾತಿನಿಧ್ಯ!

ಬಿಜೆಪಿ ಮತ್ತು ಸಂಘಪರಿವಾರದಲ್ಲಿ ಕುಂಬಾರ/ಕುಲಾಲ್/ಮೂಲ್ಯ ಸಮುದಾಯಗಳ ಯುವಕರು ಇದ್ದರೂ ಅವರಿಗೆ ರಾಜಕೀಯ...

ಅಂಬೇಡ್ಕರ್ ವಿಶೇಷ | ಭಾರತೀಯರೆಲ್ಲರೂ ಗೌರವಿಸಲೇಬೇಕಾದ ಮೇರುವ್ಯಕ್ತಿತ್ವ- ಬಾಬಾ ಸಾಹೇಬ್ ಅಂಬೇಡ್ಕರ್

ಬಾಬಾ ಸಾಹೇಬ್ ಅವರಲ್ಲದೆ ಬೇರೆಯವರು ನಮ್ಮ ಸಂವಿಧಾನ ರಚಿಸಿದ್ದರೆ ಭಾರತ ಹೇಗಿರುತ್ತಿತ್ತು...

ಆನೆಗಳ ಕುರಿತ ಹೊಸ ನಿಯಮ, ಅನಂತ ಅಂಬಾನಿಯ ವನತಾರ ಮತ್ತು ಆನೆ ತಜ್ಞ ಪ್ರೊ. ರಾಮನ್‌ ಸುಕುಮಾರ್

‌ಆನೆಗಳ ಸಾಗಾಟ ಮತ್ತು ಸಾಕಾಣಿಕೆಗೆ ಸಂಬಂಧಿಸಿದ ಹೊಸ ನಿಯಮ(ಕ್ಯಾಪ್ಟಿವ್‌ ಎಲಿಫೆಂಟ್) ಮತ್ತು...