ಬಿಲ್ಕಿಸ್ ಬಾನೊ ಪ್ರಕರಣ | ಅನಾರೋಗ್ಯ, ಬೆಳೆ ಕೊಯ್ಲು ನೆಪ: ಶರಣಾಗತಿಗೆ ಕಾಲಾವಕಾಶ ಕೋರಿದ ಅಪರಾಧಿಗಳು

Date:

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೈಲು ಅಧಿಕಾರಿಗಳೆದುರು ಶರಣಾಗಲು ಸಮಯಾವಕಾಶ ನೀಡುವಂತೆ ಕೋರಿ ಬಿಲ್ಕಿಸ್‌ ಬಾನೊ ಪ್ರಕರಣದ ಅಪರಾಧಿಗಳು, ನಾನಾ ಕಾರಣಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಪ್ರಕರಣದ ಹನ್ನೊಂದು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜನವರಿ 8ರಂದು ಆದೇಶಿಸಿತ್ತು. ಇವರಲ್ಲಿ ಮೂವರು ಅಪರಾಧಿಗಳು ಅನಾರೋಗ್ಯ, ಚಳಿಗಾಲದ ಬೆಳೆ ಕೊಯ್ಲು ಹಾಗೂ ಮಗನ ಮದುವೆಯಂತಹ ಕಾರಣಗಳನ್ನು ನೀಡಿ ಶರಣಾಗತಿಗೆ ಕಾಲಾವಕಾಶ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತನ್ನ ಅನಾರೋಗ್ಯ ಹಾಗೂ ತಂದೆ ಹಾಸಿಗೆ ಹಿಡಿದಿದ್ದಾರೆ ಎಂಬ ಕಾರಣ ನೀಡಿ ಅಪರಾಧಿ ಗೋವಿಂದಭಾಯ್‌ ನಾಯೀ ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದರೆ, ಚಳಿಗಾಲದ ಬೆಳೆ ಕೊಯ್ಲು ಇರುವುದರಿಂದ ಶರಣಾಗತಿಗೆ ಆರು ವಾರಗಳ ಸಮಯಾವಕಾಶ ನೀಡಬೇಕೆಂದು ಮಿತೇಶ್‌ ಚಮನ್‌ಲಾಲ್‌ ಭಟ್‌ ಕೇಳಿಕೊಂಡಿದ್ದಾನೆ. ಇನ್ನು ಮಗನ ಮದುವೆಯ ಕಾರಣಕ್ಕೆ ಆರು ವಾರಗಳ ಕಾಲಾವಕಾಶ ನೀಡಬೇಕೆಂದು ರಮೇಶ್‌ ರೂಪಭಾಯ್‌ ಚಂದನ್ ಅರ್ಜಿಯ ಸಲ್ಲಿಸುವ ಮೂಲಕ ವಿನಂತಿಸಿದ್ದಾನೆ.

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಸುಪ್ರೀಂ ಕೋರ್ಟ್ ಶಿಕ್ಷೆಗೆ ಗುರಿಯಾಗಿದ್ದರು.

ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ, ಆಗಸ್ಟ್ 14, 2023ರಂದು, ಈ ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು.

ಅಪರಾಧ ನಡೆದ ರಾಜ್ಯದ ನೀತಿಗೆ ಅನುಗುಣವಾಗಿ ಕ್ಷಮಾದಾನದ ಅರ್ಜಿಯನ್ನು ಪರಿಗಣಿಸಬೇಕು ಮತ್ತು ವಿಚಾರಣೆ ನಡೆದ ಸ್ಥಳದಲ್ಲಿ ಅಲ್ಲ ಎಂದು ಮೇ 2022ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಆಧರಿಸಿ ಅವರ ಶಿಕ್ಷೆ ಅವಧಿ ಕಡಿತಗೊಳಿಸಲಾಗಿತ್ತು.

ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ತೀರ್ಪಿನನುಸಾರ ತನ್ನ ಕ್ಷಮಾದಾನ ನೀತಿ ಅನ್ವಯಿಸಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಕರಣದ ಸಂತ್ರಸ್ತೆ ಬಿಲ್ಕಿಸ್‌ ಬಾನೊ ಸೇರಿದಂತೆ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಜನವರಿ 8ರಂದು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು. ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಲು ಗುಜರಾತ್‌ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದಿದ್ದ ಅದು ಎಲ್ಲಾ ಹನ್ನೊಂದು ಅಪರಾಧಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ನಿರ್ದೇಶಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...