40% ಕಮಿಷನ್ | ತನಿಖೆಗೆ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿ ರಚನೆ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್‌ ನೀಡುವಾಗ 40% ಕಮಿಷನ್‌ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಆರೋಪಿಸಿದ್ದರು. ಕಮಿಷನ್‌ ಭ್ರಷ್ಟಾಚಾರದ ತನಿಖೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.

ತನಿಖಾ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೋರಡಿಸಿರುವ ಸರ್ಕಾರ, “ಕಾಮಗಾರಿಗಳ ಟೆಂಡರ್‌, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು. ಪ್ರಕರಣಗಳಿಗೆ ಸಂಬಂಧಿಸಿದ ಸ್ಥಳ, ದಾಖಲಾತಿಗಳನ್ನು ಪರಿಶೀಲಿಸಬೇಕು. ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಶಿಫಾರಸ್ಸುಗಳೊಂದಿಗೆ ಸಂಪೂರ್ಣ ವರದಿಯನ್ನು 30 ದಿನಗಳ ಒಳಗೆ ಸಲ್ಲಿಸಬೇಕು” ಎಂದು ಹೇಳಿದೆ.

“ತನಿಖೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನೆರವು ನೀಡಬೇಕು. ತನಿಖಾ ಸಮಿತಿ ಕೇಳುವ ಅಗತ್ಯ ದಾಖಲೆಗಳು, ಮಾಹಿತಿಗಳು, ಕಡತಗಳನ್ನು ಅಧಿಕಾರಿಗಳು ಒದಗಿಸಬೇಕು. ಸಮಿತಿಯು ತನಿಖೆಗಾಗಿ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೇಮಿಸಿಕೊಳ್ಳಬಹುದು” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಟೆಂಡರ್‌ ಪ್ರಕ್ರಿಯೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಮತ್ತು ದೂರುಗಳು ಬಂದಿದ್ದರೂ, ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ಆಗಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಜಾರಿಗೊಳಿಸುವ ಉದ್ದೇಶದಿಂದ ತನಿಖಾ ಸಮಿತಿ ರಚಿಸಲಾಗಿದೆ” ಎಂದು ಆದೇಶದಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....