ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಬಿಜೆಪಿ ಸರ್ಕಾರ ಒಬ್ಬೊಬ್ಬ ಅಭ್ಯರ್ಥಿಗೂ ₹10 ಕೋಟಿ ಸಾಗಿಸುತ್ತಿದೆ: ದಿನೇಶ್ ಗುಂಡೂರಾವ್

Date:

  • ಬಿಜೆಪಿ ಸರ್ಕಾರ, ಐಟಿ ಅಧಿಕಾರಿಗಳ ವಿರುದ್ಧ ಗುಡುಗಿದ ದಿನೇಶ್‌ ಗುಂಡೂರಾವ್‌
  • ʼಸೋಲುವ ಭೀತಿಯಿಂದ ತೊಂದರೆ ಕೊಡಬೇಕು ಎಂಬುದು ಬಿಜೆಪಿ ದುರುದ್ದೇಶ’

ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ರೂ.ಹಣ ನೀಡುತ್ತಿದೆ. ಅದು ನಮಗಿರುವ ಮಾಹಿತಿ ಪ್ರಕಾರ ಐಟಿ ಅಧಿಕಾರಿಗಳ ರಕ್ಷಣೆಯಲ್ಲಿ ಸರ್ಕಾರ ಆ ಹಣ ಸಾಗಿಸುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದ್ದಾರೆ.

ಗಾಂಧಿನಗರದ ತಮ್ಮ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಬಿಜೆಪಿಗೆ ಅಧಿಕಾರಿಗಳೆಲ್ಲರೂ ರಕ್ಷಣೆ ಕೊಡುತ್ತಿದ್ದಾರೆ. ಎಲ್ಲಿಲ್ಲಿ ಹಣ ಇಡಬೇಕು, ಎಲ್ಲಿಗೆ ಕಳುಹಿಸಬೇಕು ಎನ್ನುವುದು ಅವರಿಗೆ ಸರಿಯಾಗಿ ಗೊತ್ತಿದೆ” ಎಂದರು.

“ಐಟಿ, ಇಡಿ, ಸಿಬಿಐ ಬಿಜೆಪಿಯ ಖಾಸಗಿ ವಿಭಾಗಗಳಾಗಿವೆ. ಅಭ್ಯರ್ಥಿಗಳಿಗೆ ಪೊಲೀಸ್ ವಾಹನಗಳಲ್ಲಿ ಅಥವಾ ಐಟಿ ಅಧಿಕಾರಿಗಳೇ ನೇರವಾಗಿ ತಲುಪಿಸಬಹುದು” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

“ಐಟಿ, ಇಡಿ ಅಧಿಕಾರಿಗಳ ಬಗ್ಗೆ ಕಾಂಗ್ರೆಸ್‍ಗೆ ಯಾಕೆ ಭಯ ಎಂಬ ಪ್ರಶ್ನೆ ಸಿಎಂ ಬೊಮ್ಮಾಯಿ ಕೇಳಿದ್ದಾರೆ. ಭಯ ನಮಗಿಲ್ಲ, 2018, 2019ರ ಚುನಾವಣೆ ಸಂದರ್ಭದಲ್ಲಿ ನಾವೂ ನೋಡಿದ್ದೇವೆ. ಆಗ ಕಾಂಗ್ರೆಸ್-ಜೆಡಿಎಸ್‍ನವರು ಮಾತ್ರ ಐಟಿ, ಇಡಿ ಕಣ್ಣಿಗೆ ಕಾಣಿಸಿದ್ದು. ಈ ಬಾರಿಯೂ ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ಸೋಲುವ ಭೀತಿಯಿಂದ ಹೇಗಾದರೂ ತೊಂದರೆ ಕೊಡುವುದು ಬಿಜೆಪಿಯ ದುರುದ್ದೇಶ” ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಗಾದಿಯ ಪೈಪೋಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ಎಲ್ಲ ಪಕ್ಷದಲ್ಲೂ ಸಿಎಂ ಕುರ್ಚಿಗೆ ಪೈಪೋಟಿ ಇದ್ದೇ ಇರುತ್ತದೆ. ಪೈಪೋಟಿ ಇಲ್ಲದೇ ಹೋದರೆ ಅದು ರಾಜಕೀಯ ಅನ್ನಿಸಿಕೊಳ್ಳುವುದಿಲ್ಲ. ಆದರೆ, ಸ್ಪರ್ಧೆ ಆರೋಗ್ಯಕರವಾಗಿ ಇರಬೇಕು. ಇನ್ನು ಕಾಂಗ್ರೆಸ್‍ನ ಯಾವುದೇ ಹುದ್ದೆಗಳಿಗೆ ಪೈಪೋಟಿ ನಡೆದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ...

ಚಿಕ್ಕಬಳ್ಳಾಪುರ | ಏಕಕಾಲದಲ್ಲಿ ಒಂದೇ ಕುಟುಂಬದ 85 ಮಂದಿ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ...

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...