ಟ್ರಾಫಿಕ್‌ನಿಂದ ಪಾರಾಗಲು ಅಪರಿಚಿತನ ಬೈಕ್‌ ಏರಿದ ಅಮಿತಾಬ್‌ ಬಚ್ಚನ್‌

Date:

ಮುಂಬೈನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್‌ನ ಹಿರಿಯ ನಟ ಅಮಿತಾಬ್‌ ಬಚ್ಚನ್‌ ನಿಗದಿತ ಸಮಯಕ್ಕೆ ಶೂಟಿಂಗ್‌ ಸ್ಥಳಕ್ಕೆ ತಲುಪುವ ಸಲುವಾಗಿ ಅಪರಿಚಿತ ವ್ಯಕ್ತಿಯೊಬ್ಬರಿಂದ ಲಿಫ್ಟ್‌ ಪಡೆದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಅಮಿತಾಬ್‌ ಬಚ್ಚನ್‌ ಸದ್ಯ ಹೆಸರಿಡದ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದೆ. ಭಾನುವಾರ ಬೆಳಗ್ಗೆ ತಮ್ಮ ಮನೆಯಿಂದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ತೆರಳುತ್ತಿದ್ದ ಅಮಿತಾಬ್‌ ಮಾರ್ಗ ಮಧ್ಯೆ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ತಡವಾಗುತ್ತಿರುವುದನ್ನು ಮನಗಂಡು ಬೈಕ್‌ನಲ್ಲಿ ಅದೇ ಮಾರ್ಗವಾಗಿ ಸಾಗುತ್ತಿದ್ದ ಅಪರಿಚಿತ ವ್ಯಕ್ತಿಯಿಂದ ಲಿಫ್ಟ್‌ ಪಡೆದುಕೊಂಡಿದ್ದಾರೆ.

ತಾವು ಅಪರಿಚಿತರ ಬೈಕ್‌ನಲ್ಲಿ ಸಾಗುತ್ತಿರುವ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಬಚ್ಚನ್‌, “ನೀವು ಯಾರೆಂದು ನನಗೆ ಗೊತ್ತಿಲ್ಲ. ಆದರೆ, ನೀವು ಟ್ರಾಫಿಕ್‌ ಸಮಸ್ಯೆ ನಡುವೆಯೇ ವೇಗವಾಗಿ ನಾನು ಸೇರಬೇಕಾದ ಸ್ಥಳಕ್ಕೆ ಸರಿಯಾದ ಸಮಯಕ್ಕೆ ತಲುಪಿಸಿದಿರಿ. ಲಿಫ್ಟ್‌ ನೀಡಿದ್ದಕ್ಕೆ ಧನ್ಯವಾದ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಚ್ಚನ್‌ ಅಪರಿಚಿತ ವ್ಯಕ್ತಿಯ ಬೈಕ್‌ನಲ್ಲಿ ತುರ್ತು ಸವಾರಿ ಮಾಡಿದ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈಲರ್‌ ಆಗಿದ್ದು, ಇಳಿಯ ವಯಸ್ಸಿನಲ್ಲೂ ಅಮಿತಾಬ್‌ ಬಚ್ಚನ್‌ ಅವರು ತಮ್ಮ ಕೆಲಸದ ಮೇಲಿಟ್ಟಿರುವ ಶ್ರದ್ಧೆ ಮತ್ತು ಅವರಿಗಿರುವ ಸಮಯ ಪ್ರಜ್ಞೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟನಿಗೆ ಲಿಫ್ಟ್‌ ನೀಡಿದ ವ್ಯಕ್ತಿಯನ್ನೂ ಕೂಡ ಕೊಂಡಾಡುತ್ತಿದ್ದಾರೆ. ಈ ಬೈಕ್‌ ಸವಾರಿ ವೇಳೆ ಬೈಕ್‌ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಲಿಫ್ಟ್‌ ಪಡೆದುಕೊಂಡಿರುವ ಅಮಿತಾಬ್‌ ಬಚ್ಚನ್‌ ಇಬ್ಬರೂ ಹೆಲ್‌ಮೆಟ್‌ ಧರಿಸಿಲ್ಲ. ಹೀಗಾಗಿ ಹೆಲ್‌ಮೆಟ್‌ ಧರಿಸಿ, ಸುರಕ್ಷತೆಯ ಬಗ್ಗೆ ಗಮನ ಹರಿಸುವಂತೆಯೂ ಅಭಿಮಾನಿಗಳು ಕಾಳಜಿಯಿಂದ ಪ್ರತಿಕ್ರಿಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ...