‘ಬಾಂಬೆ ಬಾಯ್ಸ್’ ಸುದ್ದಿ | ‘ಸುವರ್ಣ ಚಾನೆಲ್’ ವಿರುದ್ಧ ಕೆ ಎಸ್ ಈಶ್ವರಪ್ಪ ಕಿಡಿ

Date:

‘ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಲು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದವರು’ ಕಾರಣ ಎಂಬ ಹೇಳಿಕೆಯ ಬಗ್ಗೆ ‘ಬಾಂಬೆ ಬಾಯ್ಸ್’ ಎಂದು ತಪ್ಪಾಗಿ ಉಲ್ಲೇಖ ಮಾಡಿ ಪ್ರಸಾರ ಮಾಡಲಾಗಿದೆ ಎಂದು ‘ಸುವರ್ಣ ಚಾನೆಲ್’ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಬುಧವಾರ ಮಾತನಾಡಿರುವ ಅವರು, “ನಾನು ಮತ್ತು ಸಂಸದರಾದ ಪ್ರಲ್ಹಾದ್ ಜೋಶಿ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದೆವು. ಆದರೆ ಪತ್ರಿಕಾಗೋಷ್ಠಿ ಮುಗಿಸಿ ಪ್ರವಾಸಿ ಮಂದಿರಕ್ಕೆ ಹೋದಾಗ ‘ಸುವರ್ಣ ಚಾನೆಲ್’ನಲ್ಲಿ ‘ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಗರಂ’ ಎಂಬ ಸುದ್ದಿ ಪ್ರಸಾರವಾಗುವುದು ಗಮನಿಸಿದೆ. ಟಿವಿಗಳಲ್ಲಿ ಏನು ಬೇಕಾದರೂ ಬರೆಯಬಹುದು ಎಂಬುದು ನೋಡಿ ನನಗೆ ಆಶ್ವರ್ಯವಾಯಿತು. ನಾನು ಅಲ್ಲಿ ಬಾಂಬೆ ಬಾಯ್ಸ್ ಅಂತ ಪ್ರಸ್ತಾಪ ಮಾಡಿದ್ದನ್ನು ತೋರಿಸಲಿ. ನಾನು ಸಂತೋಷಪಡುತ್ತೇನೆ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದರು.

ಆ ಬಳಿಕ ಸಂಬಂಧಪಟ್ಟ ಹುಬ್ಬಳ್ಳಿಯ ವರದಿಗಾರನಿಗೆ ಕರೆ ಮಾಡಿ ಕೇಳಿದಾಗ, ನಾನು ಆ ಥರ ಕಳಿಸಿಲ್ಲ. ಮುಖ್ಯ ಕಚೇರಿಯಿಂದ ಹಾಗೆ ವರದಿ ಮಾಡುತ್ತಿದ್ದಾರೆ ಎಂದುತ್ತರಿಸಿದರು. ಆ ಬಳಿಕ ಸುವರ್ಣ ಚಾನೆಲ್‌ನ ಉನ್ನತ ಹುದ್ದೆಯಲ್ಲಿರುವವರಿಗೆ ತಿಳಿಸಿದಾಗ, ಬದಲಾವಣೆ ಮಾಡಿದ್ದೇವೆ ಎಂದು ಹೇಳಿದರು. ಅವರು ಬದಲಾವಣೆ ಮಾಡುವ ವೇಳೆಗೆ ಇಡೀ ರಾಜ್ಯದ ಜನ ನೋಡಿಯಾಗಿತ್ತು. ಅಲ್ಲದೇ, ‘ಬಾಂಬೆ ಬಾಯ್ಸ್’ ಸುದ್ದಿಯಿಂದ ಬಿಜೆಪಿಗೆ ಬಂದಂತಹ 17 ಜನ ಶಾಸಕರಿಗೂ ಕೂಡ ನೋವಾಗಿದೆ. ನನಗೂ ನೋವಾಯಿತು. ಅವರು ನಮಗೆ ಸಹಕಾರ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಕೂಡ ಬಂತು. ನಾನೂ ಕೂಡ ಮಂತ್ರಿಯಾದೆ. ಆದರೆ, ಅವರ ಬಗ್ಗೆ ಆಪಾದನೆ ಮಾಡಿ ಸುದ್ದಿ ಹರಡಿರುವುದು ನೋವಾಗಿದೆ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂಬಂಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಫೋನ್ ಮಾಡಿ ತಿಳಿಸಿದೆ. ಬಳಿಕ ಪಕ್ಷದ ಕಾರ್ಯಕರ್ತರ ಸಭೆಗೆ ಹೋದಾಗ, ಅಲ್ಲಿ ಸುವರ್ಣ ಚಾನೆಲ್‌ನ ವರದಿಗಾರರಿದ್ದರು. ಅವರಲ್ಲಿ ನನ್ನ ಸ್ಪಷ್ಟೀಕರಣ ಹಾಕುವಂತೆ ವಿನಂತಿಸಿದೆ. ಆದರೆ ಅವರು ವಿಡಿಯೋ ಮಾಡಲಿಲ್ಲ. ನಾನು ಅಲ್ಲಿ ‘ಬಾಂಬೆ ಬಾಯ್ಸ್‌’ ಎಂದು ಪ್ರಸ್ತಾಪವೇ ಮಾಡಿಲ್ಲ. ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ ಎಂದಷ್ಟೇ ಹೇಳಿದ್ದೆ. ಆದ್ದರಿಂದ ಇಂತಹ ಸುದ್ದಿಗಳು ಪ್ರಸಾರ ಮಾಡುವುದರಿಂದ ನಮ್ಮೊಳಗಡೆ ಗೊಂದಲ ಉಂಟಾಗುತ್ತದೆ. ಆದ್ದರಿಂದ ಹೇಳದೇ ಇರುವ ಹೇಳಿಕೆಗಳನ್ನು ಪ್ರಸಾರ ಮಾಡಬೇಡಿ’ ಎಂದು ‘ಸುವರ್ಣ ಚಾನೆಲ್‌’ನ ಹೆಸರೆತ್ತಿ ಹೇಳಿಕೆ ನೀಡಿದ್ದಾರೆ.

“ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದೆ” ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...