ಬೈಜೂಸ್‌ನಿಂದ ಭಾರತದಲ್ಲಿ ಹೆಚ್ಚಿನ ಹೂಡಿಕೆ: ಸಿಇಒ ರವೀಂದ್ರನ್‌

Date:

  • 70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ
  • ಬೈಜೂಸ್ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ

ವಿದೇಶಿ ವಿನಿಮಯ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಿಇಒ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ಶೋಧ ನಡೆಸಿದೆ. ಈ ಬೆನ್ನಲ್ಲೇ, ರವೀಂದ್ರನ್‌ ಬೈಜು ಅವರು ಈ ಕುರಿತು ಸಂಸ್ಥೆಯ ಉದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ.

ಭಾರತಕ್ಕೆ ವಿದೇಶಿ ನೇರ ಬಂಡವಾಳ (ಎಫ್‌ಡಿಐ) ತರುವುದರಲ್ಲಿ, ಇತರ ನವೋದ್ಯಮಗಳಿಗೆ ಹೋಲಿಸಿದರೆ ಬೈಜೂಸ್‌ ಪಾಲು ಹೆಚ್ಚಿಗೆ ಇದೆ ಎಂದು ಕಂಪನಿ ಸಿಇಒ ಬೈಜು ರವೀಂದ್ರನ್‌ ಪತ್ರದಲ್ಲಿ ತಿಳಿಸಿದ್ದಾರೆ.

“ವಿದೇಶಿ ವಿನಿಮಯ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲ ನಿಯಮಗಳನ್ನು ಕಂಪನಿ ಪಾಲಿಸಿದೆ. 55 ಎಫ್‌ಡಿಎ ಆರ್ಕಷಣೆಗೆ ಒಳಗಾಗಿರುವ ಕಾರಣ ಹಲವಾರು ಪ್ರತಿಭಾನ್ವಿತ ನವೋದ್ಯಮಿಗಳಿಗೆ ಕೆಲಸ ಕೊಡುವಂತಾಯಿತು. ಇದರಿಂದಾಗಿಯೇ ಭಾರತದ ಅತಿದೊಡ್ಡ ಉದ್ಯೋಗದಾತ ಕಂಪನಿ ಆಗಿ ಬೈಜೂಸ್ ಹೊರಹೊಮ್ಮಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬೈಜೂಸ್ ಒಮ್ಮೆ‍ 1.80 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿತ್ತು. ಜನರಲ್ ಅಟ್ಲಾಂಟಿಕ್, ಬ್ಲಾಕ್ ರಾಕ್ ಮತ್ತು ಸಿಕೊಯಾ ಕ್ಯಾಪಿಟಲ್ ತರಹದ ಜಾಗತಿಕ ಹೂಡಿಕೆದಾರರನ್ನೂ ಆಕರ್ಷಿಸಿತ್ತು. 70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ ಮಾಡಿದ್ದು, ‘ಫೆಮಾ’ ನಿಯಮಗಳ ಪಾಲನೆ ಸೇರಿದಂತೆ ಸಂಸ್ಥೆಯ ಕಾರ್ಯನಿರ್ವಹಣೆ ಬಗ್ಗೆ ಸಂತೃಪ್ತಿ ಹೊಂದಿದ ಬಳಿಕವೇ ಹಣ ಹೂಡಿಕೆ ಮಾಡಿದ್ದಾರೆ. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಬಗ್ಗೆ ಅರ್ಥವಾಗಲಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಸ್ವಾಧೀನ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಅದಕ್ಕಾಗಿ ಒಂದಿಷ್ಟು ಹಣವನ್ನು ಕಳುಹಿಸಲಾಗಿತ್ತು. ಕಂಪನಿಯ ಬೆಳವಣಿಗೆಯ ಭಾಗವಾಗಿ 79 ಸಾವಿರ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಾಗಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

“ಸಂಸ್ಥೆಯು 2011 ಮತ್ತು 2023ರ ನಡುವೆ 28,000 ಕೋಟಿ ರೂ.ಗೂ ಅಧಿಕ ವಿದೇಶಿ ನೇರ ಹೂಡಿಕೆ ಪಡೆದಿದೆ. ಹೆಚ್ಚಿನ ಹೂಡಿಕೆ ಪಡೆದುಕೊಂಡಿದ್ದರಿಂದ 55 ಸಾವಿರ ಪ್ರತಿಭಾನ್ವಿತರಿಗೆ ಉದ್ಯೋಗ ನೀಡಲು ಸಾಧ್ಯವಾಯಿತು. ಇದರಿಂದಾಗಿ ದೇಶದ ನವೋದ್ಯಮಗಳ ಪೈಕಿ ಅತಿ ದೊಡ್ಡ ಉದ್ಯೋಗದಾತ ಕಂಪನಿಯಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎಂದು ಬೈಜು ರವೀಂದ್ರನ್‌ ಹೇಳಿದ್ದಾರೆ.

“ಇದೇ ಅವಧಿಯಲ್ಲಿ ಸಂಸ್ಥೆಯು 9,754 ಕೋಟಿ ರೂ.ಗಳನ್ನು ವಿದೇಶಿ ನೇರ ಹೂಡಿಕೆ ಹೆಸರಿನಲ್ಲಿ ವಿದೇಶಗಳಿಗೆ ರವಾನಿಸಿದೆ. ಆದರೆ, “ವಿದೇಶಿ ಸಂಸ್ಥೆಗಳ ವಿಲೀನಕ್ಕಾಗಿ ಈ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಲೀನವು ಸಂಸ್ಥೆಯ ಜಾಗತಿಕ ವಿಸ್ತರಣೆಯ ಭಾಗವಾಗಿದೆ,” ಎಂದು ಬೈಜು ರವೀಂದ್ರನ್‌ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಳಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...

5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ,...