ಹಾಸನ | ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ

Date:

  • ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
  • 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠವೇರಿದ್ದ ಶ್ರೀಗಳು

ಹಾಸನ ಜಿಲ್ಲೆಯ ಐತಿಹಾಸಿಕ ಶ್ರವಣಬೆಳಗೊಳದ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು (ಮಾ.23) ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ತಿಂಗಳಿಂದ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಗುರುವಾರ ಮುಂಜಾನೆ ಆರೋಗ್ಯ ಸ್ಥಿತಿಯಲ್ಲಿ ದಿಢೀರ್ ಏರು ಪೇರು ಆಗಿದ್ದು, ಕೂಡಲೆ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಕಾರಣಕ್ಕೆ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಸ್ಥಳಾಂತರ ಮಾಡಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ 1949ರ ಮೇ 3 ರಂದು ಜನಿಸಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು. 1970ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತ ದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸ್ವಸ್ಥಿಶ್ರೀ ಚಾರುಕೀರ್ತಿ ಎನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ಕರ್ನಾಟಕದಲ್ಲಿ ಇದ್ದಾರೆ. ಮೂಲತಃ ಶ್ರವಣಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ 13ನೆ ಶತಮಾನದಲ್ಲಿ (1118-19)ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು “ಚಾರುಕೀರ್ತಿ” ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ ಸ್ವಸ್ಥಿ ಶ್ರೀಚಾರುಕೀರ್ತಿ ಎಂದೆ ಕರೆಯಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...