ಚಿತ್ರದುರ್ಗ | ಶಾಲಾ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟ

Date:

ಕಲಿಕೆಯಲ್ಲಿ ಓದಿನ ಜೊತೆಗೆ ಕ್ರೀಡೆಯೂ ಕೂಡ ಒಂದು ಭಾಗ. ಎಲ್ಲ ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಹೇಳಿದ್ದಾರೆ.

ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.”ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯ ಅಲ್ಲ. ಪಾಲ್ಗೊಳ್ಳುವಿಕೆ ಮುಖ್ಯ. ಸದಾ ಪಾಲ್ಗೊಳುವಿಕೆಯಿಂದ ಒಮ್ಮೆ ಸೋತಂತಹ ವ್ಯಕ್ತಿ ಯಾವುದೇ ಹಂತದಲ್ಲೂ ಸಹ ಗೆಲುವಿಗಾಗಿ ಸೆಣಸುತ್ತಾರೆ. ಇದರಿಂದ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಿದೆ” ಎಂದರು.

“ದೈಹಿಕವಾಗಿ ಸದೃಢರಾಗಿದ್ದ ವ್ಯಕ್ತಿ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ. ಆದರೆ, ಇಂದು ಹೆಚ್ಚಿನ ಮಕ್ಕಳು ಮೊಬೈಲ್‌ಗಳ ಮೊರೆ ಹೋಗಿದ್ದಾರೆ. ಇದು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ಡಿಡಿಪಿಐ ಹಾಗು ಶಾಲಾ ಮುಖ್ಯಸ್ಥರು ಎಲ್ಲಾ ಶಾಲೆಗಳಲ್ಲೂ ಕ್ರೀಡೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಸೂಚನೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚಿತ್ರದುರ್ಗ ಜಿಲ್ಲೆ 10ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲೇ ಮೊದಲನೆ ಸ್ಥಾನದಲ್ಲಿದೆ. ಅದೇ ರೀತಿ ಕ್ರೀಡೆಯಲ್ಲೂ ಕೂಡ ನಮ್ಮ ಜಿಲ್ಲೆ ಮೊದಲ ಸ್ಥಾನದಲ್ಲಿ ಇರಬೇಕು. ಇದಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಕರು ಕ್ರೀಡಾಪಟುಗಳನ್ನು ಸನ್ನದ್ಧರಾನ್ನಾಗಿ ಮಾಡಬೇಕು” ಎಂದು ಸೂಚಿಸಿದರು.

ಡಿಡಿಪಿಐ ರವಿಶಂಕರ್ ರೆಡ್ಡಿ ಮಾತನಾಡಿ, ಜಿಲ್ಲೆಯ ಮಕ್ಕಳು ಓದಿನ ಜೊತೆಗೆ ಕ್ರೀಡೆಗಳಲ್ಲೂ ಸಹ ಅತ್ಯುನ್ನತವಾದ ಪ್ರತಿಭೆಯನ್ನು ಹೊಂದಿದ್ದಾರೆ. ಈ ಪ್ರತಿಭೆ ಇದೇ ರೀತಿ ಮುಂದುವರೆಯಬೇಕಾದರೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯವಾಗಿದೆ. ಆದ್ದರಿಂದ ಮಕ್ಕಳನ್ನು ಯಾವುದೇ ಹಂತದಲ್ಲೂ ಎದೆಗುಂದುವಂತೆ ಮಾಡಬಾರದು. ಬದಲಾಗಿ ಅವರಿಗೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...