ಮಣಿಪುರದಲ್ಲಿ ನಡೆದ ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಖಂಡಿಸಿ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಳೆದು ಮೂರು ತಿಂಗಳುಗಳಿಂದ ನಿರಂತರವಾಗಿ ಮಣಿಪುರದಲ್ಲಿ ಮೈಥೇಯಿ ಸಮುದಾಯದ ಅರ್ಎಸ್ಎಸ್ ಮತ್ತು ಭಜರಂಗದಳದ ಕಾರ್ಯಕರ್ತರು ಕ್ರೆಸ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಚರ್ಚುಗಳನ್ನು ಧ್ವಂಸ ಮಾಡುತ್ತಿದ್ದಾರೆ. ಹಿಂಸಾಚಾರವನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.
“ಮಣಿಪುರದಲ್ಲಿ ನಡೆದ ಕೃತ್ಯದಲ್ಲಿ 200ಕ್ಕೂ ಹೆಚ್ಚು ಚರ್ಚ್ಗಳನ್ನು ಸುಟ್ಟುಹಾಕಿ, 100ಕ್ಕೂ ಹೆಚ್ಚು ಜನರು ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಪೋಷಕರನ್ನು ಕಳೆದುಕೊಂಡು ಹಲವರು ಅನಾಥರಾಗಿದ್ದಾರೆ. ನಿರಾಶ್ರಿತರಾಗಿದ್ದಾರೆ. ಇಡೀ ಮನುಕುಲವೇ ತಲೆತಗ್ಗಿಸುವಂತೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವ್ಯವಸ್ಥೆ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾದ ಅಧ್ಯಕ್ಷ ರಾಬರ್ಟ್ ರಾಜಶೇಖರ್, ಜಿಲ್ಲಾ ಸೂಪಡೆಂಟ್ ಶಿಮೋನ್, ರೆವರೆಂಡ್ ಡಿ. ಸುಮಿತ್ರಾ ಫಾಸ್ಟ್, ರೆವರೆಂಡ್ ಸಿ ಮಾರ್ಕ್ಸ್, ರಾಣ ರಿಚರ್ಡ್, ಶುಭದೇವಿ, ಶಾಮ್ ಸುಂದರ್ ರಾಜ್, ಇಮ್ಯಾನುವಲ್, ರೂಟ್ ನಳಿನಿ, ಸನ್ನಿ, ಸೇರಿದಂತೆ ಹಲವರು ಇದ್ದರು.