ಜಗಳದ ವೇಳೆ 4ನೇ ತರಗತಿ ವಿದ್ಯಾರ್ಥಿಗೆ 108 ಬಾರಿ ಕೈವಾರದಿಂದ ಚುಚ್ಚಿದ ಸಹಪಾಠಿಗಳು

Date:

ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರದ ಮೂಲಕ 108 ಬಾರಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಂದ ತನಿಖಾ ವರದಿ ಕೇಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಡಬ್ಲ್ಯೂಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್, ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದಲ್ಲಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿಗಳು ಜ್ಯಾಮಿತಿಯ ಕೈವಾರದಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ. ಇದೊಂದು ಆಘಾತಕಾರಿ ಪ್ರಕರಣವಾಗಿದ್ದು, ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯೂಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ ಮತ್ತು ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂದು ಪರಿಶೀಲಿಸಲಿದೆ ಎಂದು ಪೋರ್ವಾಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆಯಲ್ಲಿ ನಡೆದ ದಾಳಿಯಲ್ಲಿ ಬಾಲಕನಿಗೆ ಗಾಯದ ಗುರುತುಗಳಿವೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

“ನನ್ನ ಮಗ ಮನೆಗೆ ಹಿಂದಿರುಗಿದ ನಂತರ ಘಟನೆಯ ಬಗ್ಗೆ ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂದು ನನಗೆ ಇನ್ನೂ ತಿಳಿದಿಲ್ಲ. ಶಾಲಾ ಆಡಳಿತ ಮಂಡಳಿಯು ತರಗತಿಯ ಸಿಸಿಟಿವಿ ದೃಶ್ಯಗಳನ್ನು ನನಗೆ ನೀಡುತ್ತಿಲ್ಲ. ಪ್ರಕರಣದ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ” ಎಂದು ತಿಳಿಸಿದರು.

ದೂರು ನೀಡಿದ ನಂತರ ಸಂತ್ರಸ್ತ ವಿದ್ಯಾರ್ಥಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ...

ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರ ಜನರ ಸಂಪತ್ತನ್ನು "ನುಸುಳುಕೋರರಿಗೆ" ಹಂಚಲಿದೆ...