- ಕೊರೊನಾ ಪ್ರಕರಣಗಳ ದಾಖಲಾತಿ ಹೆಚ್ಚಳ
- ಸೂಕ್ತ ಮುಂಜಾಗೃತಾ ಕ್ರಮಕ್ಕೆ ನಿರ್ದೇಶನ
ಮುಕ್ತ ಮತ್ತು ನ್ಯಾಯಸಮ್ಮತ ವಿಧಾನಸಭಾ ಚುನಾವಣೆ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ರೂಪಾಂತರಗಳ ಭೀತಿ ಮುಂದುವರೆದಿದೆ.
ಮಾರ್ಚ್ 28ರಂದು ಕಿತ್ತೂರಿನಲ್ಲಿ 39 ಕೊರೊನಾ-19 ಪ್ರಕರಣಗಳು ಸಕ್ರಿಯವಾಗಿದ್ದರೆ, ಮಾರ್ಚ್ 29ರ ವೇಳೆಗೆ ಈ ಸಂಖ್ಯೆ 51ಕ್ಕೆ ಏರಿದೆ. ಈ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಪ್ರವೃತ್ತಿಯನ್ನು ದಾಖಲಿಸುತ್ತಿದೆ.
ಗದಗ ಜಿಲ್ಲೆಯನ್ನು ಹೊರತುಪಡಿಸಿ, ಧಾರವಾಡ 9, ಉತ್ತರ ಕನ್ನಡ 15, ಬೆಳಗಾವಿ 6, ಬಾಗಲಕೋಟೆ 5, ಹಾವೇರಿ 6, ವಿಜಯಪುರ ಜಿಲ್ಲೆಗಳಲ್ಲಿ 10 ಕೊರೊನಾ ಪ್ರಕರಣಗಳು ದಾಖಲಾಗಿವೆ.
“ಕರ್ನಾಟಕದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳ ದಾಖಲಾತಿ ಹೆಚ್ಚುತ್ತಿರುವುದು ನಿಜ. ಇತ್ತೀಚಿನ ವಿಡಿಯೋ ಕಾನ್ಫರೆನ್ಸ್ನಲ್ಲಿ, ಮುಖ್ಯ ಕಾರ್ಯದರ್ಶಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೊರೊನಾ ಕುರಿತು ಸೂಕ್ತ ಜಾರಿಗೆ ತರುವತ್ತ ಗಮನ ಹರಿಸಬೇಕು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ ಜಿ ಹಿರೇಮಠ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.
“ರಾಜಕೀಯ ಪಕ್ಷಗಳೊಂದಿಗೆ ಸಭೆಗಳನ್ನು ನಡೆಸಿ ಕೊರೊನಾ ಪರಿಸ್ಥಿತಿಯ ಬಗ್ಗೆ ವಿವರಿಸಲು ಮತ್ತು ಮುಖ್ಯವಾಗಿ ಬೃಹತ್ ಸಭೆಗಳಲ್ಲಿ ಕೊರೊನಾದ ಸೂಕ್ತ ಮುಂಜಾಗೃತಾ ಕ್ರಮ ಅನುಸರಿಸುವಂತೆ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ” ಎಂದು ಅವರು ಹೇಳಿದರು.
ಕೊರೊನಾ ಪ್ರಕರಣಗಳು ಹೆಚ್ಚಾದರೆ ಕಿತ್ತೂರು ಕರ್ನಾಟಕದ ಜಿಲ್ಲಾಧಿಕಾರಿ ಸನ್ನದ್ಧತೆಯ ಬಗ್ಗೆ ವಿವರವಾದ ತಪಾಸಣೆ ನಡೆಸಿರುವುದಾಗಿ ತಿಳಿದುಬಂದಿದೆ. ಆರೋಗ್ಯ ಮೂಲಸೌಕರ್ಯದ ಸ್ಥಿತಿ, ಬೂಸ್ಟರ್ ಡೋಸ್ಗಳ ಲಭ್ಯತೆ, ಲಸಿಕೆ ಪ್ರಕ್ರಿಯೆ ಮತ್ತು ಇತರ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ.
“ರಾಜ್ಯ ಮತ್ತು ದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾವು ಜಾಗರೂಕರಾಗಿರಬೇಕು” ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.
ಬೂಸ್ಟರ್ ಪ್ರಮಾಣ ಹೆಚ್ಚಿಸುವತ್ತ ಗಮನ ಹರಿಸಲು, ಕೊರೊನಾದ ಸೂಕ್ತ ಮುಂಜಾಗೃತ ಕ್ರಮ ಅನುಸರಿಸಲು ಜನರಲ್ಲಿ ಜಾಗೃತಿ ಮೂಡಿಸಲು ನಾನು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೊಡವೆ ಮುಕ್ತಗೊಳಿಸುತ್ತೇವೆಂದು ಮತ್ತಷ್ಟು ಫಜೀತಿ; ಕ್ಲಿನಿಕ್ಗೆ ಡಬಲ್ ದಂಡ
“ಈಗಾಗಲೆ ಅನಾರೋಗ್ಯಕ್ಕೆ ತುತ್ತಾಗಿದ್ದರೆ ಅಥವಾ ವಯಸ್ಸಾದವರು ಜಾಗರೂಕರಾಗಿರಬೇಕು. ಅವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜನದಟ್ಟಣೆಯ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು” ಎಂದು ತಿಳಿಸಿದ್ದಾರೆ.
“ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ 50 ಆಕ್ಸಿಜನ್ ಹಾಸಿಗೆಗಳು ಮತ್ತು ಇತರ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ. ಜಿಲ್ಲೆಯಲ್ಲಿ 2,000ಕ್ಕೂ ಹೆಚ್ಚು ಆಮ್ಲಜನಕ ಹಾಸಿಗೆಗಳಿವೆ” ಎಂದು ಹೇಳಿದರು.