- ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ
- ಸಮಗ್ರ ತನಿಖೆಗೆ ಆಗ್ರಹಿಸಿ ಆರೋಗ್ಯ ಸಚಿವರಿಗೆ ಮನವಿ
ಬೀದರ್ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದ್ದು, ತನಿಖೆ ನಡೆಸಿ ಹಾಗೂ ಮಾಹಿತಿ ಅಧಿನಿಯಮದಲ್ಲಿ ಎಂ.ಎಲ್.ಎಚ್.ಪಿ. ನಿಯಮಾನುಸಾರ ಮಾಹಿತಿ ಅಡಿಯಲ್ಲಿ ಕೇಳಿದ ವಿಷಯ ಮಾಹಿತಿ ನೀಡುತ್ತಿಲ್ಲ ಎಂದು ವಿಶ್ವಕ್ರಾಂತಿ ದಿವ್ಯಪೀಠ ಟ್ರಸ್ಟ್ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆರೋಪಿಸಿದರು.
ಈ ಸಂಬಂಧ ಆರೋಗ್ಯ ಸಚಿವ ದಿನೇಶ ಗುಂಡೂರಾವಾ ಅವರು ಬೀದರ್ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.
“ಬೀದರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೇಂದ್ರದ ನಿರ್ವಹಣೆ, ಸಾಮಗ್ರಿ ಖರೀದಿ ಮತ್ತು ನೇಮಕಾತಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಸಾಮಗ್ರಿ ಖರೀದಿ ವಿಷಯ ನಿಯಮಾನುಸಾರ ಪ್ರಕ್ರಿಯೆ ನಡೆಯದೇ ಕೆಲವೇ ಏಜೆನ್ಸಿಗಳ ಮುಖಾಂತರ ಖರೀದಿ ನಡೆಯುತ್ತಿದೆ. ಎಂ.ಎಲ್.ಎಚ್.ಪಿ./ ಕಮ್ಯುನಿಟಿ ಹೆಲ್ತ್ ಆಫೀಸರ್ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಕುರಿತಂತೆ ಆಯ್ಕೆ ಪ್ರಕ್ರಿಯೆ ಕುರಿತು 2023ರ ಫೆಬ್ರವರಿಯಲ್ಲಿ ಮಾಹಿತಿ ಹಕ್ಕು ಅಡಿಯಲ್ಲಿ ಕೇಳಿದರೂ ಇಲ್ಲಿಯವರೆಗೆ ಯಾವುದೇ ಮಾಹಿತಿ ನೀಡಲು ಮುಂದಾಗಲಿಲ್ಲ” ಎಂದರು.
ಈ ಸುದ್ದಿ ಓದಿದ್ದೀರಾ ? ಬೀದರ್ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
“ಈ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಗೋಲ್ಮಾಲ್ ನಡೆದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ತಕ್ಷಣವೇ ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು” ಒತ್ತಾಯಿಸಿದರು.