ಬಿಜೆಪಿಯಲ್ಲಿ ಅನಾಥವಾದ ಬಾಂಬೆ ಟೀಮ್‌ | ಕಾಂಗ್ರೆಸ್‌ ಟೀಕೆ

Date:

  • ಬಿಜೆಪಿ ಆಂತರಿಕ ಚರ್ಚೆಗೆ ಕಾರಣವಾದ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿಕೆ
  • ‘ವಲಸಿಗರಿಂದಲೇ ಬಿಜೆಪಿಗೆ ಸೋಲಾಗಿದೆ’ ಎಂದು ಹೇಳಿಕೆ ನೀಡಿದ್ದ ಕೆಎಸ್‌ ಈಶ್ವರಪ್ಪ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಆಪರೇಷನ್‌ ಕಮಲವೇ ಕಾರಣ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ನೀಡಿದ್ದ ಹೇಳಿಕೆ ಈಗ ಬಿಜೆಪಿಯ ಆಂತರಿಕ ವಲಯದಲ್ಲಿ ಬಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್‌ ಕೂಡ ವ್ಯಂಗ್ಯವಾಡಿದೆ.

“ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬೀರಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಈಗ ಅನುಭವಿಸುತ್ತಿದ್ದೇವೆ” ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿಕೆ ನೀಡಿದ್ದರು. ಆ ಮೂಲಕ ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ ಎಂಬುದನ್ನು ಪರೋಕ್ಷವಾಗಿ ಹೇಳಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್, “ಬಾಂಬೆ ಟೀಮ್ ಈಗ ಬಿಜೆಪಿಯಲ್ಲಿ ಅನಾಥರ ಟೀಮ್ ಆಗಿದೆ. ‘ವಲಸಿಗ / ಮೂಲ’ ಎಂಬ ಒಳಬೇಗುದಿಗೆ ಈಶ್ವರಪ್ಪ ತುಪ್ಪ ಸುರಿದಿದ್ದಾರೆ. ವಲಸೆ ಬಂದವರಿಂದಲೇ ಶಿಸ್ತು ಮಾಯವಾಗಿದೆ ಎಂಬ ಹೇಳಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಳ್ಳುತ್ತೀರಾ ಅಥವಾ ಈಶ್ವರಪ್ಪರನ್ನೇ ಬಾಯಿ ಮುಚ್ಚಿಸುತ್ತೀರಾ? ನಾಯಕನಿಲ್ಲದ ಬಿಜೆಪಿ, ನಾವಿಕನಿಲ್ಲದ ಹಡಗಿನಂತಾಗಿ ಮುಳುಗಿದೆ. ನೆಲ ಕಚ್ಚುವುದೊಂದೇ ಬಾಕಿ” ಎಂದು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ/ಬಿಜೆಪಿ ಎಂಬ ಹ್ಯಾಷ್‌ಟ್ಯಾಗ್‌ ಬಳಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಮತ್ತು ಬಿಎಸ್‌ವೈ ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯ ಪಡೆಯನ್ನು ಮುಂದೆ ಬಿಟ್ಟಿರುವುದೇಕೆ? ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ?” ಎಂದು ಕಾಂಗ್ರೆಸ್‌ ಕುಟುಕಿದೆ.

ಹೊರಗಿನವರು ಒಳಗಿನವರು ಎಂಬ ಭೇದವಿಲ್ಲ: ಸ್ಪಷ್ಟನೆ

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್​ ರವಿಕುಮಾರ್, “ಕೆ ಎಸ್ ಈಶ್ವರಪ್ಪ ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್​​ನಿಂದ ಬಂದವರಿಂದಲೇ ನಾವು ಅಧಿಕಾರ ನಡೆಸಿದ್ದು. ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ. ಲೋಕಸಭೆ ಚುನಾವಣೆಯನ್ನು ಎಲ್ಲರೂ ಒಟ್ಟಾಗಿ ಎದುರಿಸುತ್ತೇವೆ. ಹೊರಗಿನವರು, ಒಳಗಿನವರು ಎಂಬ ಭೇದ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಲೆ ಏರಿಕೆಗೆ ಕಡಿವಾಣ ಹಾಕದಿದ್ದರೆ, ನಾರಿಶಕ್ತಿ ಆಕ್ರೋಶಕ್ಕೆ ಕಾಂಗ್ರೆಸ್‌ ನಿರ್ನಾಮ; ಎಚ್‌ಡಿಕೆ ಕಿಡಿ

ಎಲ್ಲವನ್ನೂ ಬಂದವರ ತಲೆಗೆ ಕಟ್ಟುವುದು ಬೇಡ: ಸಿಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರತಿಕ್ರಿಯಿಸಿದ್ದು, “ನಾನು ಇದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಹೋಗುವುದಿಲ್ಲ. ನಾನು ಅಂದು ದೆಹಲಿಯಲ್ಲಿ ಕೇವಲ ಅರ್ಕಾವತಿಗೆ ಸಂಬಂಧಿಸಿದಂತೆ ಮಾತ್ರ ಹೇಳಿದ್ದೆ. ಅರ್ಕಾವತಿ ವಿಷಯದಲ್ಲಿ ನಾವು ಬಿಗಿ ನಿಲುವು ತೆಗೆದುಕೊಂಡಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಅಂತ ನಾನು ದೆಹಲಿಯಲ್ಲಿ ಹೇಳಿದ್ದೆ. ಹೀಗಾಗಿ ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟಲು ಇಷ್ಟ ಪಡುವುದಿಲ್ಲ. ಯಾರು ಸರಿ ಅಂತಲೂ ನಾವು ಹೇಳುವುದಿಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಏನೇ ಇದ್ದರೂ ಮಾತಾಡುತ್ತೇನೆ. ನಮ್ಮಿಂದ ಏನೂ ತಪ್ಪು ಆಗಿಲ್ಲ ಅನ್ನೋದು ಬೇಡ, ಕೆಲವು ತಪ್ಪಾಗಳಾಗಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....