ಬೀದರ್‌ | ಜನರ ದುರಾಸೆಗಳಿಂದ ಸೈಬರ್ ಅಪರಾಧ ಹೆಚ್ಚಳ : ಎಡಿಜಿಪಿ ಅಲೋಕ ಕುಮಾರ

Date:

ಇತ್ತಿಚೆಗೆ ಸೈಬರ ಅಪರಾಧಗಳು ಹೆಚ್ಚಾಗಲು ಜನರ ದುರಾಸೆಗಳೆ ಕಾರಣವಾಗುತ್ತಿದ್ದು, ಸಾರ್ವಜನಿಕರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಿ ಅನಾಮಧೇಯ ಮೊಬೈಲ್ ಸಂದೇಶ, ಲಿಂಕ್‌ಗಳು ಮತ್ತು ಕರೆಗಳಿಗೆ ಸ್ಪಂದನೆ ನೀಡಬಾರದು ಎಂದು ಬೆಂಗಳೂರು ತರಬೇತಿ ಕೇಂದ್ರದ ಎಡಿಜಿಪಿ ಅಲೋಕ ಕುಮಾರ ಹೇಳಿದರು.

ಮಂಗಳವಾರ ಬೀದರ ಜಿಲ್ಲಾ ವರಿಷ್ಠಾಧಿಕಾರಿಗಳ ಕಛೇರಿ ಆವರಣದಲ್ಲಿ ಬೀದರ ಜಿಲ್ಲೆಯ ಸಾರ್ವಜನಿಕರೊಂದಿಗೆ ಜನಸ್ಪಂದನ ಸಭೆ ನಡೆಸಿ ಮಾತನಾಡಿ, “ಸಾರ್ವಜನಿಕರು ತಮ್ಮ ವೈಯಕ್ತಿಯ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕವಾಗಿ ಹಂಚಿಕೊಳ್ಳಬಾರದು. ತಮಗೆ ಯಾವುದೇ ರೀತಿಯ ಮೋಸವಾದರೆ ತಕ್ಷಣೆ ಪೊಲೀಸರಿಗೆ ಮಾಹಿತಿ ನೀಡಬೇಕು. ಅಂದಾಗ ಅಪರಾಧಗಳಿಗೆ ಕಡಿವಾಣ ಹಾಕಲು ಸಹಾಯವಾಗುತ್ತದೆ. ಇತ್ತೀಚೆಗೆ ಸೈಬರ್ ಅಪರಾಧವು ಹೊಸ ಸ್ವರೂಪದಲ್ಲಿ ಬದಲಾವಣೆಯಾಗುತ್ತಿದೆ ಹಾಗಾಗಿ ಸಾರ್ವಜನಿಕರು ಎಚ್ಚರ ವಹಿಸಬೇಕು” ಎಂದರು.

“ಬೀದರ ಜಿಲ್ಲೆಗೆ ಈ ಹಿಂದೆ ಆರರಿಂದ ಏಳು ಸಲ ಬಂದಿದ್ದೇನೆ. ಭಾಲ್ಕಿ ಮತ್ತು ಔರಾದ ತಾಲೂಕಿಗೆ ಭೇಟಿ ನೀಡಿದ್ದೆನೆ. ಬೀದರ ಜಿಲ್ಲೆಯಲ್ಲಿ ಗಣೇಶ, ಮೋಹರಂ ಸೇರಿದಂತೆ ಎಲ್ಲಾ ಹಬ್ಬಗಳನ್ನು ಶಾಂತಿಯುತವಾಗಿ ಆಚರಣೆ ಮಾಡಲು ಹಾಗೂ ಯಾವುದೇ ಅಹಿತರ ಘಟನೆಗಳನ್ನು ನಡೆಯದಂತೆ ಜಿಲ್ಲೆಯ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಪಾಲನೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂಚಾರ ನಿಯಮಗಳು ಪಾಲನೆ ಮಾಡದೆ ಇರುವುದರಿಂದ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸಾಕಷ್ಟು ಸಾವುಗಳು ಸಂಭವಿಸುತ್ತಿವೆ. ಅದರಲ್ಲೂ ಮುಖ್ಯವಾಗಿ ಹೆಲ್ಮೇಟ್ ಧರಿಸದಿರುವುದ್ದರಿಂದ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಅರಿವು ಮೂಡಿಸಿ ಸಾವುಗಳ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದೆ. ಸಾರ್ವಜನಿಕರು ಸಹ ಪೊಲೀಸ್ ಇಲಾಖೆಗೆ ಇನ್ನು ಹೆಚ್ಚಿನ ಸಹಕಾರ ನೀಡಬೇಕು. ಹೆಲ್ಮೇಟ್ ಹಾಕುವುದರಿಂದ ದಂಡ ಕಟ್ಟುವುದು ತಪ್ಪುತ್ತದೆ ಎನ್ನುವ ಭಾವನೆಯಿಂದ ಹೆಲ್ಮೇಟ್ ಹಾಕದೆ, ತಮ್ಮ ಜೀವ ಉಳಿಯುತ್ತದೆ ಎನ್ನುವ ಭಾವನೆಯಿಂದ ಎಲ್ಲರೂ ಹೆಲ್ಮೇಟ್ ಕಡ್ಡಾಯವಾಗಿ ಧರಿಸಬೇಕು” ಎಂದರು.

ಇದೇ ಸಂದರ್ಭದಲ್ಲಿ ಪೊಲೀಸರು ಜಿಲ್ಲೆಯಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಭೇದಿಸಿ ಜಪ್ತಿ ಮಾಡಿದ ಸ್ವತ್ತುಗಳನ್ನು ಅದರ ಮಾಲೀಕರಿಗೆ ಎಡಿಜಿಪಿ ಅಲೋಕ ಕುಮಾರ ಅವರು ಹಸ್ತಾಂತರಿಸಿ. ಸಾರ್ವಜನಿಕರ ದೂರುಗಳನ್ನು ಆಲಿಸಿ ಅವುಗಳಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸದಾಶಿವ ಆಯೋಗದದ ವರದಿ ಜಾರಿಗೆ ಬಿಎಸ್‌ಪಿ ಒತ್ತಾಯ

ಈ ಸಭೆಯಲ್ಲಿ ಕಲಬುರ್ಗಿ ವಿಭಾಗದ ಡಿಐಜಿ ಅಜಯ್ ಹಿಲ್ಲೋರಿ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ, ಬೀದರ ಉಪ ಪೊಲೀಸ್ ಅಧೀಕ್ಷಕ ಶಿವನಗೌಡ ಪಾಟೀಲ್, ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ...