ಬಿಜೆಪಿಯೊಳಗಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಲಿ: ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

Date:

  • ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ‌
  • ‘ಯಡಿಯೂರಪ್ಪರಂತಹ ಸಮರ್ಥ ನಾಯಕ ಬಿಜೆಪಿಗೆ ಬೇಕು’

ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ವಾಗ್ದಾಳಿ‌ ನಡೆಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಾವು ಮಾತನಾಡಿದರೆ ಪಕ್ಷವಿರೋಧಿ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್​ಸಿ ಹಾಗೂ ರಾಜ್ಯಸಭಾ ಸ್ಥಾನ ಅವರು ಹೇಳಿದವರಿಗೆ ನೀಡಲಾಗುತ್ತಿದೆ. ಅವರ ಒಳ ಹೊಡೆತಗಳು ಹೇಳತೀರದು” ಎಂದು ಅಸಮಾಧಾನ ಹೊರಹಾಕಿದರು.

“ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ; ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್​ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡೋದು ಬೇಡ ಅಂತ ಒತ್ತಡ ಹಾಕಿದ್ದೆವು. ಕೆಲ ನಾಯಕರು ಯಡಿಯೂರಪ್ಪರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು” ಎಂದು ತಿಳಿಸಿದರು.

“ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಆದರೆ, ಅದು ಆಗಲಿಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ...

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...