ರಾಜಸ್ಥಾನ | ನಿರಂತರ ದ್ವೇಷ ಹರಡುವ ‘ಜೈಪುರ್ ಡೈಲಾಗ್ಸ್‌’ನ ನಿರ್ದೇಶಕನಿಗೆ ಕಾಂಗ್ರೆಸ್ ಟಿಕೆಟ್!

Date:

ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ ‘ಜೈಪುರ್ ಡೈಲಾಗ್ಸ್‌’ನ ನಿರ್ದೇಶಕನಿಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಸೇರಿದಂತೆ ಧರ್ಮಾಧಾರಿತ ದ್ವೇಷ ಹರಡುವ ಕೆಲಸ ಮಾಡುತ್ತಿರುವ thejaipurdialogues.comನ ಪಾಲುದಾರ ಹಾಗೂ ನಿರ್ದೇಶಕನೂ ಆಗಿರುವ ಸುನಿಲ್ ಶರ್ಮಾಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸುನಿಲ್ ಶರ್ಮಾ ಅವರು ಜೈಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಗಮನ ಸೆಳೆದಿರುವ ಆಲ್ಟ್ ನ್ಯೂಸ್ ಸಹಸಂಸ್ಥಾಪಕ, ದ್ವೇಷ ಹರಡುವವರ ವಿರುದ್ಧ ನಿರಂತರ ಬೇಟೆಯಾಡುತ್ತಿರುವ ಮುಹಮ್ಮದ್ ಝುಬೈರ್, “ಜೈಪುರ್ ಡೈಲಾಗ್ಸ್‌ನ ಪಾಲುದಾರ ಹಾಗೂ ನಿರ್ದೇಶಕ ಸುನೀಲ್ ಶರ್ಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಆಹಾ. ಇದು ಅದ್ಭುತವೇ ಸರಿ” ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಟ್ಯಾಗ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಝುಬೈರ್ ಅವರು ಹಂಚಿಕೊಂಡಿರುವ ವೀಡಿಯೋದಲ್ಲಿ ರಾಜಸ್ಥಾನ್ ಚೌಕ್ ಎಂಬ ಡಿಜಿಟಲ್ ಮೀಡಿಯಾದ ವರದಿಗಾರರೊಬ್ಬರು ಸುನಿಲ್ ಶರ್ಮಾ ಅವರನ್ನು ಜೈಪುರ್ ಡೈಲಾಗ್ಸ್ ಬಗ್ಗೆ ಪ್ರಶ್ನಿಸಿದ್ದಕ್ಕೆ, ಸುನಿಲ್ ಶರ್ಮಾ ಕ್ಯಾಮೆರಾದಿಂದ ತಪ್ಪಿಸಿಕೊಂಡು ಹೋಗುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ಅಲ್ಲದೇ, ಈ ಹಿಂದೆ ದೇಶದ ಖ್ಯಾತ ಪತ್ರಕರ್ತ ರವೀಶ್ ಕುಮಾರ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಜೈನ್ ಸೇರಿದಂತೆ ಹಲವರ ವಿರುದ್ಧ ಮಾಡಿರುವ ದ್ವೇಷದ ಪೋಸ್ಟ್‌ಗಳನ್ನು ಕೂಡ ಝುಬೈರ್ ಹಂಚಿಕೊಂಡಿದ್ದಾರೆ.

‘ಜೈಪುರ್ ಡೈಲಾಗ್ಸ್‌’ ಬಲಪಂಥೀಯ ವಿಚಾರಧಾರೆ, ದ್ವೇಷವನ್ನು ವೆಬ್‌ಸೈಟ್‌ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಹಂಚುವಲ್ಲಿ ಕುಖ್ಯಾತಿ ಪಡೆದಿದೆ. ಇವರ ಯೂಟ್ಯೂಬ್ ಚಾನೆಲ್ ಸುಮಾರು 14 ಲಕ್ಷ Subcribers ಅನ್ನು ಕೂಡ ಹೊಂದಿದೆ. ಇದಕ್ಕೆ ಐವರು ನಿರ್ದೇಶಕರಿದ್ದು, ಅದರಲ್ಲಿ ಸುನಿಲ್ ಶರ್ಮಾ ಕೂಡ ಒಬ್ಬರು.

ರಾಜಸ್ಥಾನದಲ್ಲಿ ‘ಜೈಪುರ್ ಡೈಲಾಗ್ಸ್‌’ನಂತೆಯೇ ಕರ್ನಾಟಕದಲ್ಲಿಯೂ ಕೂಡ ಸಂವಾದ, ಟಿವಿ ವಿಕ್ರಮ ಹೆಸರಿನ ಯೂಟ್ಯೂಬ್‌ ಚಾನೆಲ್ ಇದೇ ರೀತಿ ದ್ವೇಷ ಹರಡವುದರಲ್ಲಿ ನಿರತವಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...