ಕೋಳಿ ಮಾಂಸ ಮಾರಾಟ ಅಂಗಡಿಗೆ ವಾಣಿಜ್ಯ ಸಿಲಿಂಡರ್ ವಿತರಿಸಲು ತೆರಳಿದ್ದಾಗ, ಸಿಲಿಂಡರ್ ವಿತರಣಾ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.
ನಗರದ ಚಿಕನ್ ಅಂಗಡಿ ಮಾಲೀಕ ಸಮದ್ ಹಲ್ಲೆ ನಡೆಸಿದ ಆರೋಪಿ. ಮೂರು ದಿನಗಳ ಹಿಂದೆ ಎಲ್ಪಿಜಿ ಸಿಲಿಂಡರ್ ಬುಕ್ ಮಾಡಿದ್ದರೂ ಸಹ ಸರಿಯಾದ ಸಮಯಕ್ಕೆ ಸಿಲಿಂಡರ್ ಸಿಗೇ ಇದ್ದ ಕಾರಣ ಸಮದ್ ಅಸಮಾಧನಗೊಂಡಿದ್ದರು. ಸಿಲಿಂಡರ್ ಬಂದಾಗ ಸಮದ್, ಚಾಲಕ ಸದಾನಂದನ ಜೊತೆ ಜಗಳವಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಚಾಲಕ ಸದಾನಂದ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ. ಚಾಲಕನ ವಿರುದ್ಧ ಪ್ರತಿದೂರು ದಾಖಲಿಸಿರುವ ಸಮದ್, ‘ಚಾಲಕ ತನಗೆ ಬೆದರಿಕೆ ಹಾಕಿದ್ದ’ ಎಂದು ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.
ದೂರು ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.