ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ‌ ಸಮಾವೇಶ

Date:

ಫೆಬ್ರವರಿ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಸಾರಿ ಬರಗಾಲ ಎದುರಾದಾಗ ಪರಿಹಾರ ನೀಡುತ್ತವೆ. ಇದರಿಂದ ರೈತ ಸಮಸ್ಯೆಗಳಿಗೆ ಪರಿಹಾರ ಸಿಗುವದಿಲ್ಲ. ಬರ ನಿವಾರಣೆಗೆ ಶಾಸ್ವತವಾಗಿ ಯೋಜನೆಗಳನ್ನು ರೂಪಿಸಬೇಕು. ಸಣ್ಣ ನೀರಾವರಿ ಯೋಜನೆಗಳು ಬರ ಪರಿಹಾರಕ್ಕೆ ಹೆಚ್ಚು ಅನುಕೂಲವಾಗಲಿದೆ” ಎಂದರು.

“ರಾಜ್ಯ ಸರ್ಕಾರವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಮತ್ತು ಬರ ಪರಿಹಾರಕ್ಕೆ ಯೋಜನೆಗಳನ್ನು ರೂಪಿಸಬೇಕು. ಬೇಸಾಯ ಪದ್ದತಿಯಲ್ಲಿ ಬದಲಾವಣೆ ಮಾಡಬೇಕು. ರೈತರಿಗೆ ಆದಾಯ ಭದ್ರತೆಯನ್ನು ನೀಡಬೇಕು. ರಾಜ್ಯದ ಜನತೆಗೆ ನೀಡುತ್ತಿರುವ ಅಕ್ಕಿಯ ಜೊತೆಗೆ ರಾಗಿ, ಜೋಳ, ಎಣ್ಣೆ, ಬೇಳೆಕಾಳು ಸಹ ನೀಡಬೇಕು. ಮುಖ್ಯವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ಪರ ಬಜೆಟ್ ಮಂಡನೆ ಮಾಡಬೇಕು. ಇಂತಹ ಅನೇಕ ವಿಷಯಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ” ನಡೆಯಲಿದೆ ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪತ್ರಿಕಾಗೋಷ್ಠಿಯಲ್ಲಿ ಚಾಮರಸ ಮಾಲಿ ಪಾಟಿಲ್, ಬಸವರಾಜ ಮೋಕಾಶಿ, ಶಿವನಗೌಡ ಪಾಟಿಲ, ಗಣಾಚಾರಿ,
ಬಾಳಪ್ಪ ಪಾಟಿಲ ಹಾಗೂ ಹಲವು ರೈತ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...