ಕೇರಳದಲ್ಲಿ ಷಡ್ಯಂತ್ರದ ಸಿನಿಮಾ ಆಟ ನಡೆಯಲ್ಲ ; ಬೀನಾ ಪೌಲ್‌

Date:

ʼದಿ ಕೇರಳ ಸ್ಟೋರಿʼ ದುರುದ್ದೇಶದ ಸಿನಿಮಾ ಎಂದ ಖ್ಯಾತ ಸಂಕಲನಕಾರ್ತಿ

ಕೇರಳದ ಜನ ಅಸಲಿ ಕಥೆಯನ್ನು ಗೆಲ್ಲಿಸಿದ್ದಾರೆ ಎಂದ ಬೀನಾ

ತಿರುಚಿದ ಕಥಾಹಂದರದ ಕಾರಣಕ್ಕೇ ಸುದ್ದಿಯಲ್ಲಿರುವ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗ್ಗೆ ರಾಷ್ಟ್ರ ಪ್ರಶಸ್ತಿ ವೀಜೆತೆ, ಮಲಯಾಳಂನ ಖ್ಯಾತ ಸಿನಿಮಾ ಸಂಕಲನಕಾರ್ತಿ ಬೀನಾ ಪೌಲ್‌ ಮಾತನಾಡಿದ್ದು, ಇದು ಮೌಲ್ಯಗಳೇ ಇಲ್ಲದ ದುರುದ್ದೇಶಪೂರಿತ ಚಿತ್ರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಬೀನಾ ಪೌಲ್‌, “ಇಂತಹ ದುರುದ್ದೇಶಪೂರಿತ ಚಿತ್ರಕ್ಕೆ ಅನಗತ್ಯವಾಗಿ ಪ್ರಚಾರ ನೀಡಲಾಗುತ್ತಿದೆ. ಯಾರು ಕೂಡ ಈ ಚಿತ್ರದ ಬಗ್ಗೆ ಮಾತನಾಡದೆ ಕಡೆಗಣಿಸಿದ್ದರೆ ತನ್ನಷ್ಟಕ್ಕೆ ತಾನೇ ಸೋತು ಮೂಲೆ ಸೇರುತ್ತಿತ್ತು. ಇವತ್ತಿನ ಪರಿಸ್ಥಿತಿಯಲ್ಲಿ ಯಾರು ಬೇಕಾದರೂ ದುರುದ್ದೇಶದ ಸಿನಿಮಾಗಳನ್ನು ಮಾಡಬಹುದು. ಯಾಕೆಂದರೆ ಅಂಥವರನ್ನೇ ರಕ್ಷಿಸಲಾಗುತ್ತಿದೆ. ತಿರುಚಿದ ಕಥಾಹಂದರದ ಕಾರಣಕ್ಕೆ ನ್ಯಾಯಾಲಯದ ಆದೇಶ ಪಾಲಿಸಿ ನಿರ್ದೇಶಕರು ಚಿತ್ರದ ಟ್ರೈಲರ್‌ ಅನ್ನು ಬದಲಿಸಬೇಕಾಯಿತು. ಆದರೆ, ಆ ಬಗ್ಗೆ ಯಾರು ಕೂಡ ಮಾತನಾಡುವುದಿಲ್ಲ” ಎಂದಿದ್ದಾರೆ.

“ನಿರ್ದಿಷ್ಟ ಜನರ ಆಶಯಗಳನ್ನು ಪೋಷಿಸುವ ಸಲುವಾಗಿ ಈ ಸಿನಿಮಾ ಮಾಡಿದ ಹಾಗಿದೆ. ಆದರೆ, ಈ ಷಡ್ಯಂತ್ರದ ಸಿನಿಮಾ ಆಟ ನಮ್ಮ ಕೇರಳದ ಜನರ ಎದುರು ನಡೆಯಲಿಲ್ಲ. ಕೇರಳಿಗರು ʼದಿ ಕೇರಳ ಸ್ಟೋರಿʼಯನ್ನು ನಿರಾಕರಿಸಿದರು. ಈ ಸಿನಿಮಾಗೆ ಎದುರಾಗಿ ಬಿಡುಗಡೆಯಾದ ಕೇರಳದ ಅಸಲಿ ಕಥೆಯುಳ್ಳ ʼ2018ʼ ಚಿತ್ರವನ್ನು ಜನ ಗೆಲ್ಲಿಸಿದರು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೆಚ್ಚುತ್ತಿರುವ ದ್ವೇಷ ಮತ್ತು ಹಿಂದಿ ಚಿತ್ರರಂಗದ ʼಜಾಣ ಮೌನʼ

ಬೀನಾ ಪೌಲ್‌ ಮಾತ್ರವಲ್ಲ, ಕಮಲ್‌ ಹಾಸನ್‌, ನವಾಜುದ್ದೀನ್‌ ಸಿದ್ದಿಕಿ, ಅನುರಾಗ್‌ ಕಶ್ಯಪ್‌, ನಾಸಿರುದ್ದೀನ್‌ ಶಾ ಸೇರಿದಂತೆ ಭಾರತೀಯ ಚಿತ್ರರಂಗದ ಹಲವು ತಾರೆಯರು ಮತ್ತು ತಂತ್ರಜ್ಞರು ʼದಿ ಕೇರಳ ಸ್ಟೋರಿʼ ಚಿತ್ರವನ್ನು ವಿರೋಧಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಆಗಿ...

ಅಶ್ಲೀಲ ವಿಡಿಯೋ ಪ್ರಸಾರ : 18 ಒಟಿಟಿ, 19 ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಕೇಂದ್ರ

ಹಲವು ಎಚ್ಚರಿಕೆಗಳ ನಡುವೆಯೂ ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡುತ್ತಿದ್ದ 18 ಒಟಿಟಿ...

ತುಮಕೂರು | ತುಕಾಲಿ ಸಂತೋಷ್‌ ಕಾರು ಅಪಘಾತ; ಆಟೋ ಚಾಲಕ ಸಾವು

ಬಿಗ್‌ಬಾಸ್‌ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ...

ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ...