ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಂಧ್ರ ಪ್ರದೇಶ ಡಿಸಿಎಂ ನಾರಾಯಣಸ್ವಾಮಿ ಕಲತೂರು ವಿರುದ್ಧ ತೆಲಂಗಾಣದ ಹೈದರಾಬಾದ್ನಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
ಹೈದರಾಬಾದ್ನ ಹುಕೂರು ಮಂಡಲ್ನಲ್ಲಿ ಹಮ್ಮಿಕೊಂಡಿದ್ದ ಸಮಾಜ ಸುಧಾರಕ ಯಾತ್ರೆಯ ಸಾರ್ವಜನಿಕ ಸಮಾರಂಭದಲ್ಲಿ ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪದ ಮೇಲೆ ದೂರು ದಾಖಲಾಗಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ನ ಉಪಾಧ್ಯಕ್ಷರಾದ ಡಾ. ಮಲ್ಲು ರವಿ ದೂರು ದಾಖಲಿಸಿದ್ದಾರೆ.
ಡಿಸಿಎಂ ನಾರಾಯಣಸ್ವಾಮಿ ಕಲತೂರು ವಿರುದ್ಧ ಬೇಗಂ ಬಜಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504(ಉದ್ದೇಶಪೂರ್ವಕ ಅವಮಾನ ಹಾಗೂ ಶಾಂತಿಗೆ ಭಂಗ ತರುವುದು), 505(2) (ವಿವಿಧ ಜನಾಂಗಗಳ ಮಧ್ಯೆ ದ್ವೇಷ, ಸಾಮರಸ್ಯವನ್ನು ಕೆಡಿಸುವುದು) ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮಲ್ಲು ರವಿ, ಆಂಧ್ರ ಡಿಸಿಎಂ ಅವರು ಕಾಂಗ್ರೆಸ್ ಸಂಸದೀಯ ಸಮಿತಿಯ ಅಧ್ಯಕ್ಷರಾದ ಸೋನಿಯಾ ಗಾಂಧಿ ವಿರುದ್ಧ ಅವಿಭಜಿತ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅಕಾಲಿಕ ಮರಣಕ್ಕೆ ಸೋನಿಯಾ ಕಾರಣರೆಂಬ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಇವರ ಇಂತಹ ಹೇಳಿಕೆಗಳು ಖಂಡನೀಯ ಹಾಗೂ ಉತ್ತಮ ರಾಜಕಾರಣದಲ್ಲಿ ಶೋಭೆ ತರುವುದಿಲ್ಲ. ಈ ಪ್ರಕರಣದ ಜೊತೆ ‘ದೇಶಕ್ಕಾಗಿ ದಾನ ಮಾಡಿ’ ಹೆಸರಿನಲ್ಲಿ ನಕಲಿ ವೆಬ್ಸೈಟ್ ಆರಂಭಿಸಿ ವಂಚಿಸಿರುವವರ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮಲ್ಲು ರವಿ ತಿಳಿಸಿದ್ದಾರೆ.