ಆಳ ಸಮುದ್ರದಲ್ಲೂ ಸಿಗುತ್ತಿಲ್ಲ ಮೀನುಗಳು; ಬಂದರ್‌ನಲ್ಲೇ ಲಂಗರು ಹಾಕಿವೆ ಬೋಟ್‌ಗಳು

Date:

ಚಳಿಗಾಲದಲ್ಲಿ ಮೀನುಗಾರಿಕೆಯಲ್ಲಿ ತೊಡಗಬೇಕಿದ್ದ ಬೋಟ್‌ಗಳು ಕಡಲ ತೀರದಲ್ಲೇ ನಿಂತಿವೆ. ಮೀನು ಹಿಡಿಯುವ ಕಾಯಕದಲ್ಲಿ ತೊಡಗಬೇಕಿದ್ದ ಮೀನುಗಾರರು ಬೋಟ್‌ಗಳು ಮತ್ತು ಬಲೆಗಳ ರಿಪೇರಿ ಕೆಲಸ ಮಾಡುತ್ತಾ ಕುಳಿತಿದ್ದಾರೆ. ಸಮುದ್ರದಲ್ಲಿ ಹೆಚ್ಚಾಗಿ ಮೀನುಗಳು ಸಿಗದ ಕಾರಣ, ಮೀನುಗಾರಿಕೆ ಕುಂಟಿತಗೊಂಡಿದೆ ಎಂದು ಹೇಳಲಾಗಿದೆ.

ಸರ್ಕಾರದ ಆದೇಶದಂತೆ ಆಗಸ್ಟ್‌ 1ರಿಂದ ಮೀನುಗಾರಿಕೆ ಆರಂಭವಾಗುತ್ತದೆ. ಪ್ರತಿವರ್ಷ ಜೂನ್ 1ರಿಂದ ಜುಲೈ 30ರವರೆಗೆ ಎರಡು ತಿಂಗಳುಗಳ ಕಾಲ ಮೀನುಗಾರಿಕೆಗೆ ನಿರ್ಬಂಧವಿರುತ್ತದೆ. ಮೀನುಗಳು ಮೊಟ್ಟೆ ಇಟ್ಟು, ಮರಿ ಮಾಡುವ ಕಾರಣದಿಂದಾಗಿ ಆ ಅವಧಿಯಲ್ಲಿ ಮೀನುಗಾರಿಕೆ ಮಾಡಿದರೆ, ಮೀನುಗಳ ಸಂತತಿ ವೃದ್ಧಿಯಾಗುವುದಿಲ್ಲ ಎಂಬ ಕಾರಣಕ್ಕೆ ನಿರ್ಬಂಧ ಹೇರಲಾಗಿರುತ್ತದೆ. ಇಳಿದಂತೆ ಆಗಸ್ಟ್‌ 1ರಿಂದ ಮೇ 31ರವರೆಗೆ ಮೀನುಗಾರಿಕೆ ಅವಕಾಶ ಇರುತ್ತದೆ. ಮೀನುಗಾರರು ಸಮುದ್ರದಲ್ಲಿ ಮೀನು ಹಿಡಿಯುವಲ್ಲಿ ತೊಡಗುತ್ತಾರೆ.

ಆದರೆ, ಈ ಬಾರಿ, ಮೀನುಗಾರಿಕೆ ಆರಂಭವಾಗಿ ನಾಲ್ಕು ತಿಂಗಳು ಕಳೆದಿಲ್ಲ. ಆಗಲೇ, ಮೀನುಗಾರಿಕಾ ಬೊಟ್‌ಗಳು ಬಂದರಿನಲ್ಲಿ ಲಂಗರು ಹಾಕುತ್ತಿವೆ. 30 ನಾಟಿಕಲ್ ಮೈಲ್‌ಗಳ ಆಳ ಸಮುದ್ರಕ್ಕೆ ಹೋದರೂ ಕೂಡ ಮೀನುಗಳು ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಮೀನುಗಾರರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆಳ ಸಮುದ್ರದಲ್ಲಿ ಒಮ್ಮೆ ಮೀನುಗಾರಿಕೆಗೆ ತೆರಳಲು 40-50 ಸಾವಿರ ರೂ. ವೆಚ್ಚವಾಗುತ್ತದೆ. ಆದರೆ, ಆದ ವೆಚ್ಚ ಹಿಂದಿರುಗುವಷ್ಟು ಮೀನುಗಳು ಸಿಗುತ್ತಿಲ್ಲ. ಹಾಕಿದ ಬಂಡವಾಳದ ಅರ್ಧದಷ್ಟು ಮಾತ್ರವೇ ಹಣ ದೊರೆಯುತ್ತಿದೆ. ಮೀನುಗಾರಿಕೆಯಲ್ಲಿ ನಷ್ಟ ಎದುರಾಗಿದೆ” ಎಂದು ಮೀನುಗಾರರು ಹೇಳುತ್ತಿದ್ದಾರೆ.

“ಪ್ರತಿವರ್ಷವೂ ಆಳ ಸಮುದ್ರದಲ್ಲಿ ತರಹೇವಾರಿ ಮೀನುಗಳು ಸಿಗುತ್ತಿದ್ದವು. ಹಾಕಿದ್ದ ಬಂಡವಾಳಕ್ಕಿಂತ ಹೆಚ್ಚಿನ ಆದಾಯ ಸಿಗುತ್ತಿತ್ತು. ಜೀವನವೂ ಉತ್ತಮವಾಗಿ ನಡೆಯುತ್ತಿತ್ತು. ಆದರೆ, ಈ ಬಾರಿ, 40 ಸಾವಿರ ರೂ. ಬಂಡವಾಳ ಹಾಕಿ ಮೀನುಗಾರಿಕೆ ಹೋದರೆ, 15-20 ಸಾವಿರ ರೂ.ಗಳಷ್ಟು ಮೌಲ್ಯದ ಮೀನುಗಳು ದೊರೆಯುತ್ತಿವೆ. ಬೋಟ್‌ಗಳಿಗೆ ಹಾಕಿದ ಡೀಸೆಲ್‌ ಹಣವೂ ವಾಪಸ್‌ ಬರುತ್ತಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...