ಗದಗ | ಪ್ರವಾಸೋದ್ಯಮ ಅಭಿವೃದ್ಧಿಗೆ ಆಳವಾದ ಅಧ್ಯಯನವಾಗಲಿ: ಸಚಿವ ಎಚ್‌ ಕೆ ಪಾಟೀಲ್

Date:

  • ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ
  • ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡುವಂತೆ ಸಮಿತಿಗೆ ಸೂಚನೆ

ಗದಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ ಸೂಚಿಸಿದರು.

ಗದಗ ನಗರದ ರೈತರ ಭವನದಲ್ಲಿ ಜರುಗಿದ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ತಳಮಟ್ಟದಲ್ಲಿ ಅಧ್ಯಯನ ಮಾಡಿ ಉತ್ತಮ ವರದಿಯನ್ನು ಒಂದು ತಿಂಗಳೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು. ಗದಗ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸಲು ಪೂರಕ ವಾತಾವರಣವಿದೆ. ಇರುವ ಸಂಪನ್ಮೂಲ ಸಮರ್ಪಕವಾಗಿ ಬಳಸಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸೋಣ ಎಂದರು.

ಜಿಲ್ಲೆಯಲ್ಲಿ ವಾಸ್ತುಶಿಲ್ಪಕ್ಕೆ ಪ್ರಸಿದ್ದಿ ಪಡೆದಿರುವ ಲಕ್ಕುಂಡಿ, ಹರ್ತಿ, ಡಂಬಳ, ಹುಲಕೋಟಿ ಸೇರಿದಂತೆ ಇತರೆ ಸ್ಥಳಗಳು ಐತಿಹಾಸಿಕ ದೇವಾಲಯಗಳನ್ನು ಹೊಂದಿದ್ದು, ಈ ಕುರಿತು ಈಗಾಗಲೇ ರಚಿಸಿರುವ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಆಳವಾದ ಅಧ್ಯಯನ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೋಣ, ಗಜೇಂದ್ರಗಡ, ನರಗುಂದ, ಶ್ರೀಮಂತಗಡ ಕೋಟೆಗಳು ಐತಿಹಾಸಿಕ ಚಾರಿತ್ರ್ಯ ಸಾರುವ ಕೋಟೆಗಳಾಗಿವೆ. ಹತ್ತಿರದ ಕಪ್ಪತಗುಡ್ಡ ಔಷಧಿ ಗುಣವುಳ್ಳ ಸಸ್ಯ ಸಂಪತ್ತನ್ನು ತನ್ನ ಒಡಲಲ್ಲಿ ಅಡಗಿಸಿಕೊಂಡು ಸಹ್ಯಾದ್ರಿಯಾಗಿದೆ. ಬಿಂಕದಕಟ್ಟಿಯಲ್ಲಿ ಇರುವ ಪ್ರಾಣಿ ಸಂಗ್ರಹಾಲಯವು 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮ ಆಚರಣೆ ಮಾಡಿದೆ. ನಗರದ ಭೀಷ್ಮಕೆರೆ, ಜುಮ್ಮಾ ಮಸೀದಿ, ತಿರಂಗಾ ಪಾರ್ಕ್‌, ಬೆಟಗೇರಿಯ ತಾರಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ನೇಕಾರಿಕೆ ಇವೆಲ್ಲವುಗಳು ಪ್ರವಾಸಿಗರ ಆಕರ್ಷಣೆಗೆ ಪೂರಕವಾಗಿವೆ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಿ; ಬಿ ವಾಮದೇವಪ್ಪ ಸಲಹೆ

ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ಮನೋಜ ಕುಮಾರ್, ಕಾರ್ಯದರ್ಶಿಯಾಗಿ ಜಿ. ಜಗದೀಶ, ಸದಸ್ಯರಾಗಿ ಮಂಜುನಾಥ ಚವ್ಹಾಣ, ಜೆ ಕೆ ಜಮಾದಾರ, ವಿವೇಕಾನಂದಗೌಡ ಪಾಟೀಲ, ಡಾ. ಎಸ್ ಜಿ ಚಲವಾದಿ, ಕಿಶೋರ ಬಾಬು ನಾಗರಕಟ್ಟೆ, ಎ ದೇವರಾಜ, ಎಫ್ ಎನ್ ಹುಡೇದ ಸೇರಿದಂತೆ ಒಟ್ಟು 16 ತಜ್ಞರು ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಬಿ ಸುಶೀಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಎಂ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ’ ಅಭಿಯಾನ

ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ...

ದಕ್ಷಿಣ ಕನ್ನಡ | ಮೀನಿನ ಆಹಾರ ತಯಾರಿಕಾ ಘಟಕದಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ...

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...