ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ ಬಳಗದ 10 ಜನ ಸೇರಿ ಅಂಜನಾದ್ರಿ ದರ್ಶನ ಪಡೆಯುವುದಕ್ಕೆ ಬಂದಿದ್ದರು, ಈ ವೇಳೆ ಮೆಟ್ಟಿಲುಗಳನ್ನು ಹತ್ತುವಾಗ ಯುವಕನಿಗೆ ಏಕಾಏಕಿ ಹೃದಯಘಾತ ಉಂಟಾಗಿದ್ದು, ಸ್ಥಳದಲ್ಲೇ ಮೂರ್ಛೆ ಹೋಗಿದ್ದಾನೆ. ತಕ್ಷಣ ಗೆಳೆಯರು ಸೇರಿಕೊಂಡು ಆತನನ್ನು ಸ್ಥಳೀಯ ಆನೆಗುಂದಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ, ಗಂಗಾವತಿ ತಾಲೂಕು ಆಸ್ಪತ್ರೆ ತರುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ವೈದ್ಯರು ಮಾಹಿತಿ ನೀಡಿದ್ದಾಗಿ ಯುವಕನ ಸಂಬಂಧಿ ನಾಗಮ್ಮ ಅವರು ಮಾದ್ಯಮಗಳಿಗೆ ಹೇಳಿದ್ದಾರೆ.