ನಮ್ಮ ಕ್ಲಿನಿಕ್ | ನಂ.1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಿಂತನೆ

Date:

  • ಪ್ರಾಯೋಗಿಕವಾಗಿ ಶೇ. 25 ರಷ್ಟು ಕ್ಲಿನಿಕ್ ಗಳಿಗೆ ಮೇಜರ್ ಸರ್ಜರಿ
  • ‘ನಮ್ಮ ಕ್ಲಿನಿಕ್’ಗಳ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ

ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್‌ಗಳನ್ನು ನಂಬರ್ 1 ಕ್ಲಿನಿಕ್‌ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಭಿನ್ನ ಪ್ರಯೋಗಗಳಿಗೆ ಕೈ ಹಾಕಿದ್ದಾರೆ.‌

ನಗರ ಪ್ರದೇಶಗಳ ಬಡವರು ಹಾಗೂ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ನಮ್ಮ ಕ್ಲಿನಿಕ್ ಗಳ ಮುಖಾಂತರ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಹೊಸ ಕಾಯಕಲ್ಪ‌ ನೀಡಲು ಯೋಜನೆ ರೂಪಿಸಲಾಗುತ್ತಿದೆ.

ಪ್ರಾಯೋಗಿಕ ಹಂತವಾಗಿ ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ ಶೇ.25 ರಷ್ಟು ಕ್ಲಿನಿಕ್ ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ಅಸಹಾಯಕರು ಬಡವರಿಗೆ ಅನುಕೂಲ ಆಗಲಿ ಎಂದು ರಾಜ್ಯದ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ತೆರೆಯಲಾಗಿತ್ತು. ಆದರೆ, ನಮ್ಮ ಕ್ಲಿನಿಕ್ ಗಳು ತೆರೆಯುತ್ತಿದ್ದ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಬದಲಾವಣೆಗೆ ಕೈ ಹಾಕಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಸ್ತುತ ನಮ್ಮ ಕ್ಲಿನಿಕ್‌ಗಳು ಬೆಳಗ್ಗೆ 9 ಗಂಟೆಗೆ ತೆರೆದು ಮಧ್ಯಾಹ್ನ 12.30ಕ್ಕೆ ಮುಚ್ಚಲಾಗುತ್ತದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ತೆರೆದು 4.30ಕ್ಕೆ ಸೇವೆ ನಿಲ್ಲಿಸಲಾಗುತ್ತಿದೆ.

ಇದೀಗ ನಮ್ಮ ಕ್ಲಿನಿಕ್‌ಗಳನ್ನು ಸಂಜೆ ಕ್ಲಿನಿಕ್ ಮಾದರಿಯಲ್ಲಿ ಸಮಯ ಬದಲಾಯಿಸಲು ನಿರ್ಧರಿಸಲಾಗಿದ್ದು, 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ತಯಾರಿ ನಡೆಸಲಾಗಿದೆ.

ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುವ ಸಮಯ ಹಾಗೂ ನಮ್ಮ ಕ್ಲಿನಿಕ್ ಗಳ ಸಮಯ ಎರಡು ಕೂಡ ಒಂದೇ ಆಗುತ್ತಿತ್ತು. ಇದರಿಂದ ಬಡವರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹೀಗಾಗಿ ರಾತ್ರಿಯವರೆಗೂ ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುವಂತೆ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದರು.

ರಾತ್ರಿವರೆಗೂ ಕಾರ್ಯನಿರ್ವಹಿಸಬೇಕಾದರೆ ಎರಡು ಶಿಫ್ಟ್ ಮಾಡಬೇಕಾಗಬಹುದು.‌ ಆಗ ಹೆಚ್ಚಿನ‌ ವೈದ್ಯರು ಬೇಕಾಗುತ್ತಾರೆ. ಈಗಾಗಲೇ ವೈದ್ಯರ ಕೊರತೆಯಿದೆ ಎಂಬ ವಾದಗಳು ಕೂಡಾ ಕೇಳಿ ಬಂದಿದ್ದವು. ಅಂತಿಮವಾಗಿ ಎರಡು ಶಿಫ್ಟ್ ಮಾಡುವ ಬದಲು ಒಂದೇ ಶಿಫ್ಟ್ ನಲ್ಲಿ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರು.‌

ಬೆಳಗ್ಗೆ 7 ಗಂಟೆಗೆ ನಮ್ಮ ಕ್ಲಿನಿಕ್ ಗಳು ತೆರೆಯಲಿದ್ದು, ಬೆಳಗ್ಗೆ ಹೊತ್ತಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಮಾತ್ರ ಇರುತ್ತಾರೆ. ಬಳಿಕ 12 ಗಂಟೆಯಿಂದ 8 ಗಂಟೆವರೆಗೂ ವೈದ್ಯರು ಹಾಗೂ ನರ್ಸ್ ಜನರಿಗೆ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಲಾಗಿದೆ.‌ ರಾಜ್ಯದಲ್ಲಿ ಒಟ್ಟು 415 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಶೇ 25 ರಷ್ಟು ಕ್ಲಿನಿಕ್ ಗಳನ್ನ ಪ್ರಾಯೋಗಿಕ ಹಂತದಲ್ಲಿ ಸಂಜೆ ಕ್ಲಿನಿಕ್ ಗಳಾಗಿ ಸಮಯ ಬದಲಾವಣೆ ಮಾಡಲಾಗುತ್ತಿದೆ. ಇವುಗಳು ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲ ನಮ್ಮ ಕ್ಲಿನಿಕ್ ಗಳ ಸಮಯವನ್ನ ಬದಲಾವಣೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.

ಸಂಜೆ ವೇಳೆ ನಮ್ಮ ಕ್ಲಿನಿಕ್ ಗಳಲ್ಲಿ ಒಪಿಡಿ ತೆರೆಯುವುದರಿಂದ ಸಾಕಷ್ಟು ಅನುಕೂಲ ಕೂಡ ಆಗಲಿದೆ.‌ ಹೀಗೆ ಆಗುವ ಬದಲಾವಣೆಯಿಂದ ಜನರಿಗೆ ಅನುಕೂಲ ಆಗುತ್ತಾ? ಜನ ಈ ಯೋಜನೆಯ ಫಲಾನುಭವಿ ಆಗ್ತಾರಾ ಅಂತ ಕಾದು ನೋಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸಕ್ತಿ ತೋರಿದ್ದಾರೆ. ಬಳಿಕ ಹಂತ ಹಂತವಾಗಿ ನಮ್ಮ ಕ್ಲಿನಿಕ್‌ಗಳಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳನ್ನ ಒದಗಿಸಲು ಯೋಜಿಸಲಾಗಿದೆ.

ಈವರೆಗೆ ಸುಮಾರು ಮೂರು ಲಕ್ಷದ 96 ಸಾವಿರ ಮಹಿಳೆಯರು ಹಾಗೂ 4 ಲಕ್ಷದ 21 ಸಾವಿರ ಪುರುಷರು ನಮ್ಮ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಪ್ರತಿ ದಿನ ಸರಾಸರಿ 35 ರಿಂದ 40 ಜನರು ಚಿಕಿತ್ಸೆ ಪಡೆಯಲು ನಮ್ಮ ಕ್ಲಿನಿಕ್ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನೂ 2 ಲಕ್ಷದ 88 ಸಾವಿರ ಜನರು ರೋಗಪರೀಕ್ಷೆಗಳನ್ನ ಮಾಡಿಸಿಕೊಂಡಿದ್ದಾರೆ. ನಮ್ಮ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ವಿಸುವ ನಿಟ್ಟಿನಲ್ಲಿ ಮಹತ್ತರ ಬದಲಾವಣೆಗಳನ್ನ ತರಲಾಗುತ್ತಿದೆ‌

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...