ಹಿಜಾಬ್ ವಿವಾದ ಮುನ್ನೆಲೆಯಲ್ಲಿದ್ದಾಗ ಕೇಸರಿ ಶಾಲು ಧರಿಸಿ ಗಲಾಟೆ ಮಾಡಿದ್ದ ವಿದ್ಯಾರ್ಥಿಗಳ ಮುಂದೆ ಘೋಷಣೆ ಕೂಗಿ ದೇಶದ ಗಮನ ಸೆಳೆದಿದ್ದ ಮಂಡ್ಯದ ಮುಸ್ಕಾನ್ ಮತ್ತೆ ಮಾತನಾಡಿದ್ದಾರೆ. ‘ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ’ ಎಂದಿದ್ದಾರೆ.
ಹಿಜಾಬ್ ನಿರ್ಬಂಧದ ಆದೇಶವನ್ನು ಹಿಂಪಡೆಯಲು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಹಿಜಾಬ್ ನಿಷೇಧದ ಕಾರಣದಿಂದ ಶಾಲೆ-ಕಾಲೇಜು ತೊರೆದಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಸರ್ಕಾರದ ನಿಲುವನ್ನು ಸ್ವಾಗತಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸ್ವಾಗತಿಸಿರುವ ಮುಸ್ಕಾನ್, “ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹಮ್ಮದ್ ಅವರಿಗೆ ಧನ್ಯವಾದಗಳು. ನನ್ನ ಓದು ಅರ್ಧಕ್ಕೆ ನಿಂತಿತ್ತು. ಈಗ ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ” ಎಂದು ಹೇಳಿದ್ದಾರೆ.
“ನನಗೆ ಭರವಸೆ ಇತ್ತು. ನಾನು ಓದನ್ನು ಮುಂದುವರೆಸುತ್ತೇನೆ. ಹಿಜಾಬ್ ನಿಷೇಧದಿಂದಾಗಿ ಯಾರೆಲ್ಲ ಕಾಲೇಜು ತೊರೆದಿದ್ದಾರೆ. ಅವರೆಲ್ಲರೂ ಮರಳಿ ಕಾಲೇಜಿಗೆ ಬನ್ನಿ” ಎಂದು ಕರೆಕೊಟ್ಟಿದ್ದಾರೆ.
“ನಾವೆಲ್ಲರೂ ಸಹೋದರರಂತೆ ಇದ್ದೇವೆ. ಶಿಕ್ಷಣದಲ್ಲಿ ರಾಜಕೀಯ ಬೇಡ. ಮೊದಲಿನಂತೆ ನಾವೆಲ್ಲರೂ ಒಟ್ಟಿಗೆ ಇರಬೇಕು” ಎಂದು ಹೇಳಿದ್ದಾರೆ.
ಹಿಜಾಬ್ ವಿವಾದ ರಾಜ್ಯದಲ್ಲಿ ವ್ಯಾಪಿಸಿದ್ದ ಸಮಯದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿಯೂ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಹಿಜಾಬ್ ವಿರುದ್ಧ ಗಲಾಟೆ ಮಾಡಿದ್ದರು. ಆ ವೇಳೆ, ಅದೇ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಹಿಜಾಬ್ ಧರಿಸಿ ಬಂದಿದ್ದರು. ಅವರನ್ನು ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಸುತ್ತುವರೆದಿದ್ದರು. ಅವರೆಲ್ಲರ ಮುಂದೆ ಹಿಜಾಬ್ ಪರ ಘೋಷಣೆ ಕೂಗಿದ್ದ ಮುಸ್ಕಾನ್ ದೇಶ ಮಾತ್ರವಲ್ಲದೇ, ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದ್ದರು.
ಪ್ರತಿ ಮುಸ್ಲಿಂ ವಿದ್ಯಾರ್ಥಿನಿ ಯರು ಕೇಸರಿ ಬಣ್ಣದ ಹಿಜಬ್ ಹಾಕಿ ಶಾಲೆಗೆ ಹೋಗಿ ಯಂದು ನನ್ನ ಸಣ್ಣ ಸಲಹೆ