ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

Date:

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ.

“ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ ವಿಳಂಬವಾಗುತ್ತಿದೆ. ಇ-ಆಸ್ತಿ, ಖಾತಾ ವರ್ಗಾವಣೆ, ಜನನ-ಮರಣ ಪತ್ರ ಸೇರಿದಂತೆ ಬಹುತೇಕ ನಾಗರಿಕ ಸೇವೆಗಳನ್ನು ಒದಗಿಸಲು ಅಧಿಕಾರಿಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಸಾರ್ವಜನಿಕರಿಗೆ ಸೇವೆ ಒದಗಿಸಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಕುರಿತ ವಿಡಿಯೋ, ಆಡಿಯೋ ಸಾಕ್ಷಿಗಳನ್ನು ನಾವು ಸಂಗ್ರಹಿಸಿದ್ದೇವೆ. ಅವುಗಳನ್ನು ಲೋಕಾಯುಕ್ತರು ಮತ್ತು ಪಾಲಿಕೆಯ ಆಯುಕ್ತರ ಗಮನಕ್ಕೆ ತರಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಚೇರಿಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಇಲ್ಲವಾದಲ್ಲಿ ಬಡವರು, ಹೆಂಗಸರು, ವಯಸ್ಸಾದವರು ಎಂದು ನೋಡದೆ ಅಲೆದಾಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದು, ಈ ಹಿಂದೆ 9-10 ತಿಂಗಳುಗಳಿಂದ ವಿಲೇವಾರಿ ಆಗದೆ ಉಳಿದಿರುವ ಹಲವು ಅರ್ಜಿಗಳ ಸ್ವೀಕೃತಿ ಪ್ರತಿಗಳನ್ನು ಮಾಧ್ಯಮಗಳ ಎದುರಿಗೆ ಪ್ರದರ್ಶಿಸಿದರು.

“ಕಚೇರಿಯಲ್ಲಿ ಯಾವುದೇ ನಾಮಫಲಕವಾಗಲಿ, ಸಂಬಂಧಿತ ಸೇವೆಗಳ ಬಗ್ಗೆ ಮಾಹಿತಿ ಫಲಕಗಳಾಗಲಿ ಇಲ್ಲದೆ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಯಾರನ್ನು ಸಂಪರ್ಕಿಸಬೇಕೆಂದು ತಿಳಿಯದೆ ಪರದಾಡುವಂತಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ಕಿ ನೀಡಲು ಕೇಂದ್ರ ನಿರಾಕರಣೆ; ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ಸಹಾಯಕ ವಲಯ ಆಯುಕ್ತ ಫಕ್ಕೀರಪ್ಪ ಇಂಗಳಗಿ ಸ್ಥಳಕ್ಕೆ ಧಾವಿಸಿದ್ದು, ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಮತ್ತು ಕಚೇರಿಯ ಆಡಳಿತ ಸುಧಾರಣೆಗಾಗಿ ತಾವು ಕೈಗೊಂಡಿರುವ ಕ್ರಮಳನ್ನು ಹೋರಾಟಗಾರರಿಗೆ ವಿವರಿಸಿ, ಇನ್ನು ಎರಡು ದಿನಗಳ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲ ಹಿಂದಿನ ಕಡತಗಳನ್ನು ತೆರವುಗೊಳಿಸುವಾದಾಗಿ ಭರವಸೆ ನೀಡಿ ಪ್ರತಿಭಟನೆಯನ್ನು ಹಿಂಪಡೆಯಲು ಕೋರಿದರು.

ಪ್ರತಿಭಟನೆಯಲ್ಲಿ ಚಾಮುಂಡೇಶ್ವರಿ ನಗರದ ಅಧ್ಯಕ್ಷ ಪರಶುರಾಮ ಮಲ್ಯಾಳ, ವೆಂಕಟೇಶ್ ಕೊಂಡಪಲ್ಲಿ, ನರಸಿಂಹ ವೆಪಚಾರಲ, ಕೊಂಡಯ್ಯ ಪೂಜಾರಿ, ನರಸಪ್ಪ ಎಲಕಪಟಿ, ಆನಂದ ಮಾದರ, ಪ್ರಶಾಂತ ಮಾದರ, ಜೀವನ ಅನಂತಪುರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...