ಇಸ್ರೇಲ್ ‘ಆತ್ಮ ರಕ್ಷಣೆ’ಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ

Date:

ಗಾಜಾದಲ್ಲಿ ಇಸ್ರೇಲ್‌ನ ಧೋರಣೆ ಮತ್ತು ಕ್ರಮಗಳು ‘ಆತ್ಮ ರಕ್ಷಣೆ’ಯ ವ್ಯಾಪ್ತಿ ಮೀರಿ ಹೋಗಿವೆ. ಇಸ್ರೇಲಿ ಸರ್ಕಾರವು ‘ಗಾಜಾದ ಜನರನ್ನು ಸಾಮೂಹಿಕವಾಗಿ ಶಿಕ್ಷಿಸುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಶನಿವಾರ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಅವರಿಗೆ ಕರೆ ಮಾಡಿ ವಾಂಗ್ ಅವರು ಮಾತನಾಡಿದ್ದಾರೆ. “ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಮತ್ತಷ್ಟು ಆಕ್ರಮಣಕ್ಕೆ ಸಜ್ಜಾಗುತ್ತಿರುವುದು ಕಂಡುಬಂದಿದೆ” ಎಂದು ಅವರು ಹೇಳಿದ್ದಾರೆ.

ಸೌದಿ ಅರೇಬಿಯಾ ಮತ್ತು ಹಮಾಸ್ ಬೆಂಬಲಿಗ ರಾಷ್ಟ್ರ ಇರಾನ್ ನಡುವೆ ಮಾರ್ಚ್‌ನಲ್ಲಿ ಸಂಬಂಧಗಳನ್ನು ಮರುಸ್ಥಾಪಿಸುವಲ್ಲಿ ಚೀನಾ ಮಧ್ಯವರ್ತಿಯಾಗಿ ಸ್ಥಾನ ಪಡೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಸ್ರೇಲ್‌ನ ಕ್ರಮಗಳು ಆತ್ಮರಕ್ಷಣೆಯ ವ್ಯಾಪ್ತಿಯನ್ನು ಮೀರಿವೆ. ಅಂತರಾಷ್ಟ್ರೀಯ ಸಮುದಾಯ ಮತ್ತು ಯುಎನ್ ಸೆಕ್ರೆಟರಿ ಜನರಲ್  ಕರೆಗಳನ್ನು ಇಸ್ರೇಲ್‌ ಶ್ರದ್ಧೆಯಿಂದ ಆಲಿಸಬೇಕು. ಗಾಜಾದ ಜನರ ಸಾಮೂಹಿಕ ಶಿಕ್ಷೆಯನ್ನು ನಿಲ್ಲಿಸಬೇಕು” ಎಂದು ವಾಂಗ್ ಹೇಳಿದ್ದಾರೆ.

ಗಾಜಾದ ಜನನಿಬಿಡ ಎನ್‌ಕ್ಲೇವ್‌ನ ಉತ್ತರ ಭಾಗದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಅವರೆಲ್ಲರಿಗೂ ನಿರೀಕ್ಷಿತ ದಾಳಿಯ ಕಾರಣಕ್ಕಾಗಿ ಅಲ್ಲಿಂದ ಪಲಾಯನ ಮಾಡಲು ಆದೇಶಿಸಲಾಗಿದೆ. ಆದರೆ, ಇಸ್ರೇಲ್‌ ನಿರ್ಮಿಸಿರುವ ಬೇಲಿ, ರಸ್ತೆಗಳ ನಾಶದ ಕಾರಣಕ್ಕಾಗಿ ಜನರು ಎಲ್ಲಿಯೂ ಹೋಗಲಾಗದೆ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಹೊರ ಹೋಗಲು ಹರಸಾಹಸ ಪಡುತ್ತಿದ್ದಾರೆ.

23 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿರುವ ಗಾಜಾ ಪ್ರದೇಶವು 2006ರಿಂದ ಭೂಮಿ, ವಾಯು ಮತ್ತು ಸಮುದ್ರ ಮಾರ್ಗಗಳ ದಿಗ್ಬಂಧನದಲ್ಲಿದೆ.

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ನಿರ್ಮಿಸಿರುವ ಭದ್ರವಾದ ಬೇಲಿಯನ್ನು ಭೇದಿಸಿ ಹಮಾಸ್‌ ಹೋರಾಟಗಾರರು ಇಸ್ರೇಲ್‌ ವಿರುದ್ಧ ಸಮರಕ್ಕಿಳಿದಿದ್ದಾರೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ ಆತ್ಮ ರಕ್ಷಣೆಯ ಹೆಸರಿನಲ್ಲಿ ಪ್ರತಿಕಾರದ ಬಾಂಬ್‌ ದಾಳಿ ನಡೆಸುತ್ತಿದೆ. ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಯಾವುದೇ ಕ್ರಮಗಳನ್ನು ಎರಡೂ ಕಡೆಯವರು ತೆಗೆದುಕೊಳ್ಳಬಾರದು. ಸಾಧ್ಯವಾದಷ್ಟು ಬೇಗ ಮಾತುಕತೆಗೆ ಬರಬೇಕು” ಎಂದು ವಾಂಗ್ ಹೇಳಿದ್ದಾರೆ.

ವಾಂಗ್ ಅವರು ಯುಎಸ್‌ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರೊಂದಿಗೆ ಶನಿವಾರ ಪೋನ್‌ ಕರೆಯಲ್ಲಿ ಮಾತನಾಡಿದ್ದಾರೆ.  “ಶಾಂತಿ ಮತ್ತು ಒಮ್ಮತವನ್ನು ತರಲು ಸಾಧ್ಯವಾದಷ್ಟು ಬೇಗ ಅಂತರರಾಷ್ಟ್ರೀಯ ಶಾಂತಿ ಸಭೆಯನ್ನು ಕರೆಯಬೇಕು” ಎಂದು ವಾಂಗ್‌ ಒತ್ತಾಯಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಲು ಮತ್ತು ಶಾಂತಿ ಮಾತುಕತೆಗೆ ಕರೆಯಲು ಚೀನಾದ ವಿಶೇಷ ರಾಯಭಾರಿ ಝೈ ಜುನ್ ಮುಂದಿನ ವಾರ ಮಧ್ಯಪ್ರಾಚ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಘಿದೆ.

“ಕದನ ವಿರಾಮಕ್ಕಾಗಿ ಎಲ್ಲರೊಂದಿಗೆ ಸಮನ್ವಯ ಸಾಧಿಸಲು, ನಾಗರಿಕರನ್ನು ರಕ್ಷಿಸಲು, ಪರಿಸ್ಥಿತಿಯನ್ನು ಸುಗಮಗೊಳಿಸಲು ಮತ್ತು ಶಾಂತಿ ಮಾತುಕತೆಗಳನ್ನು ನಡೆಸಲು ಮುಂದಿನ ವಾರ ಮಧ್ಯಪ್ರಾಚ್ಯಕ್ಕೆ ಝೈ ಜುನ್ ಭೇಟಿ ನೀಡಲಿದ್ದಾರೆ” ಎಂದು ಚೀನಾದ ಸಿಸಿಟಿವಿ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

"ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ...

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....