ಎಸ್‌ ಆರ್‌ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ; ಜೆಡಿಎಸ್‌ ತೊರೆದ ನೂರಾರು ಮುಖಂಡರು

Date:

  • 300ಕ್ಕೂ ಹೆಚ್ಚು ಜೆಡಿಎಸ್‌ ಮುಖಂಡರು ರಾಜೀನಾಮೆ
  • ಗುಬ್ಬಿ ಕ್ಷೇತ್ರದ ಅಭ್ಯರ್ಥಿ ಘೋಷಿಸದ ಕಾಂಗ್ರೆಸ್

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಲೆಕ್ಕಚಾರ ಜೋರಾಗಿವೆ. ಪ್ರಭಾವಿ ನಾಯಕರುಗಳ ಪಕ್ಷಾಂತರ ಪರ್ವ ಸಹ ಶುರುವಾಗಿದೆ. ಜೆಡಿಎಸ್‌ ಉಚ್ಛಾಟಿತ ಶಾಸಕ ಎಸ್‌ ಆರ್‌ ಶ್ರೀನಿವಾಸ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಜೆಡಿಎಸ್‌ ಪಕ್ಷದಿಂದ ಉಚ್ಛಾಟಿತರಾಗಿರುವ ಗುಬ್ಬಿ ಶಾಸಕ ಎಸ್‌ ಆರ್‌ ಶ್ರೀನಿವಾಸ್‌ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ದಳದಿಂದ ಹೊರಬಂದ ಬಳಿಕ ಶ್ರೀನಿವಾಸ್ ಕಾಂಗ್ರೆಸ್ ನಾಯಕರೊಂದಿಗೆ ಸಕ್ರಿಯವಾಗಿ ಕಾಣಿಸಿಕೊಂಡಿದ್ದರು. ಈ ಹಿಂದೆಯೂ ಕಾಂಗ್ರೆಸ್ ಸೇರುವ ಇಂಗಿತ ಹೊರಹಾಕಿದ್ದರು.

ಶ್ರೀನಿವಾಸ್ ಅವರು ಅಧಿಕೃತವಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಜಿ. ಹೊಸಹಳ್ಳಿ ಗ್ರಾಮದಲ್ಲಿ ಸಾಲು ಸಾಲು ಜೆಡಿಎಸ್ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

300ಕ್ಕೂ ಹೆಚ್ಚು ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು, ಜೆಡಿಎಸ್​​​ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಕಚೇರಿಗೆ ರವಾನಿಸಿದ್ದಾರೆ.

ತಮ್ಮ ರಾಜೀನಾಮೆ ಕುರಿತು ತುಮಕೂರಿನ ಗುಬ್ಬಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಶ್ರೀನಿವಾಸ್, “ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಸದ್ಯಕ್ಕೆ ನಾನೊಬ್ಬನೇ ರಾಜೀನಾಮೆ ಕೊಡುತ್ತೇನೆ. ಬೇರೆ ಶಾಸಕರ ಬಗ್ಗೆ ನನಗೆ ಗೊತ್ತಿಲ್ಲ” ಎಂದಿದ್ದಾರೆ.

“ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಬೇಕಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು” ಎಂದಿರುವ ಶ್ರೀನಿವಾಸ್ ಅವರು ಗುಬ್ಬಿಯಲ್ಲಿ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ರಾಜ್ಯ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ಮೊದಲ ಪಟ್ಟಿಯಲ್ಲಿ ತುಮಕೂರು ನಗರ, ಗ್ರಾಮಾಂತರ ಮತ್ತು ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಶ್ರೀನಿವಾಸ್ ಅವರ ಹೆಸರು ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಇರಲಿದೆ.

ಕಳೆದ ನಾಲ್ಕು ಚುನಾವಣೆಗಳಲ್ಲೂ ಸತತ ಗೆಲುವು ಸಾಧಿಸಿರುವ ಶ್ರೀನಿವಾಸ್ ಅವರ ಸೇರ್ಪಡೆ ಕಾಂಗ್ರೆಸ್‌ಗೆ ಬಲ ತಂದುಕೊಡಲಿದೆ. ಬಿಜೆಪಿಯ ಅನೇಕ ನಾಯಕರುಗಳು ಕಾಂಗ್ರೆಸ್‌ ಸೇರುತ್ತಿರುವ ನಡುವೆ ಜೆಡಿಎಸ್‌ ನಾಯಕ ಪಕ್ಷಾಂತರ ಆಗುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ ವಿಪ್‌ಗೆ ಎಸ್ ಆರ್ ಶ್ರೀನಿವಾಸ್ ಸೆಡ್ಡು ಹೊಡೆದು ಕಾಂಗ್ರೆಸ್‌ಗೆ ಬೆಂಬಲ ನೀಡಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದಾರೆ. ಪಕ್ಷಕ್ಕೆ ಸೆಡ್ಡು ಹೊಡೆದ ಶ್ರೀನಿವಾಸ್‌ಗೆ ಬುದ್ಧಿ ಕಲಿಸಲು ಜೆಡಿಎಸ್ ಈಗಾಗಲೇ ಇಲ್ಲಿ ಬಿ.ಎಸ್‌. ನಾಗರಾಜು ಎಂಬ ಅಭ್ಯರ್ಥಿಯನ್ನು ಘೋಷಿಸಿ ಬೃಹತ್‌ ಸಮಾವೇಶವನ್ನೂ ನಡೆಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ...

ಮಣಿಪುರ ಹಿಂಸಾಚಾರ | ಸ್ಥಳಾಂತರಗೊಂಡ ಮತದಾರರಿಗೆ ʼಚುನಾವಣೆʼಗಳು ಅರ್ಥಹೀನ

ಕಳೆದ ವರ್ಷ ಮಣಿಪುರದ ಚುರಾಚಂದ್‌ಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಸ್ಥಳಾಂತರಗೊಂಡ...

ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

ಜಾರಿ ನಿರ್ದೇಶನಾಲಯವು (ಇಡಿ) ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ. ದೆಹಲಿ...